ಪಕ್ಷದ ಸಂಘಟನೆ ಕೆಲಸಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 17, 2025 | 3:59 PM

ಕಾರ್ಯಕ್ರಮದ ಉದ್ಘಾಟನೆ ನಂತರ ಮಾತಾಡಿದ ಶಿವಕುಮಾರ್ ಅವರ ಭಾಷಣದ ತಿರುಳು ಸಹ ಯುವಕರು ಮತ್ತು ಮಹಿಳೆಯರು ಆಗಿತ್ತು. ಕೆಪಿಸಿಸಿ ಅಧ್ಯಕ್ಷನಾದಾಗ ಯುವಕರು ಮತ್ತು ಮಹಿಳೆಯರ ಸಬಲೀಕರಣದ ಬಗ್ಗೆ ಮಾತಾಡಿದ್ದೆ, ಅದರಂತೆ ಯುವಕರಿಗೆ ಮತ್ತು ಮಹಿಳಿಯರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ ಎಂದ ಅವರು ಪಕ್ಷದ ಯುವ ಅಧ್ಯಕ್ಷ ಮತ್ತು ಎಲ್ಲ ಪದಾಧಿಕಾರಿಗಳಿಗೆ ಶಿಸ್ತು ಬಹಳ ಮುಖ್ಯ ಅಂತ ಹೇಳಿದರು.

ಬೆಂಗಳೂರು, 17ಮಾರ್ಚ್: ನಗರದ ಅರಮನೆ ಮೈದಾನದದಲ್ಲಿ ಇಂದು ಆಯೋಜಿಸಲಾಗಿದ್ದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸುವಾಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೂತನ ಪದಾಧಿಕಾರಿಗಳಿಗೆ ಮತ್ತು ಮಹಿಳಾ ಕಾರ್ಯಕರ್ತೆಯರಿಗೆ ಆದ್ಯತೆ ನೀಡಿದರು. ಯುವ ನಾಯಕರು ಮತ್ತು ಮಹಿಳಾ ಕಾರ್ಯಕರ್ತೆಯ ಮೂಲಕ ಅವರು ದೀಪ ಬೆಳಗಿಸುವುದನ್ನು ದೃಶ್ಯಗಳಲ್ಲಿ ನೋಡಬಹುದು. ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿರುವ ಶಿವಕುಮಾರ್ ಪಕ್ಷದ ಸಂಘಟನೆ ಕೆಲಸಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಮತ್ತು ಕಾರ್ಯಕ್ರಮಗಳಲ್ಲಿ ಹೆಚ್ಚು ಲವಲವಿಕೆಯಿಂದ ಓಡಾಡುತ್ತಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅನಿವಾರ್ಯ ಕಾರಣಗಳಿಂದಾಗಿ ಕೆಪಿಸಿಸಿ ಕಚೇರಿಯಲ್ಲಿ ಇಂದು ಮಹಿಳಾ ದಿನಾಚರಣೆ ಆಚರಿಸಲಾಗಿದೆ: ಶಿವಕುಮಾರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.