ಶಿಗ್ಗಾವಿ ಕಾಂಗ್ರೆಸ್ ಸಮಾವೇಶದಲ್ಲಿ ಶಿವಕುಮಾರ್ ಭಾಗಿ, ಯಾಸಿರ್ ಪಠಾಣ್​ಗಾಗಿ ಮತಯಾಚನೆ

ಅರುಣ್​ ಕುಮಾರ್​ ಬೆಳ್ಳಿ

Updated on: Nov 07, 2024 | 3:55 PM

ದುಂಡಶಿ ಕಾಂಗ್ರೆಸ್ ಸಮಾವೇಶದಲ್ಲಿ ಹೆಚ್ ಕೆ ಪಾಟೀಲ್, ಈಶ್ವರ್ ಖಂಡ್ರೆ, ಶಿವಾನಂದ ಪಾಟೀಲ್, ಪ್ರಕಾಶ್ ರಾಠೋಡ್ ಮೊದಲಾದವರು ಸೇರಿದ್ದರು. ವೇದಿಕೆ ಮೇಲೆ ಹಿಂದೆ ಕುಳಿತಿದ್ದ ಮುಖಂಡರೊಬ್ಬರು ಶಿವಕುಮಾರ್ ಭುಜ ತಟ್ಟಿ ನಮಸ್ಕರಿಸುತ್ತ ಇಂಪ್ರೆಸ್ ಮಾಡಲು ಪ್ರಯತ್ನಿಸುತ್ತಾರೆ, ಅದರೆ ಶಿವಕುಮಾರ್ ಮುಗುಳ್ನಗುವ ಕೆಲಸವನ್ನೂ ಮಾಡಲ್ಲ!

ಹಾವೇರಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶಿಗ್ಗಾವಿ ಕ್ಷೇತ್ರದಲ್ಲಿ ನಿನ್ನೆಯಿಂದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪ್ರಚಾರ ಮಾಡುತ್ತಿದ್ದಾರೆ. ಇಂದು ಕ್ಷೇತ್ರದ ದುಂಡಶಿ ಗ್ರಾಮದಲ್ಲಿ ಏರ್ಪಡಿಲಾಗಿದ್ದ ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಅವರು ಭಾಗಿಯಾಗಿದ್ದರು. ಮೆರವಣಿಗೆಯಲ್ಲಿ ಶಿವಕುಮಾರ್ ಆಗಮಿಸುವಾಗ ವೇದಿಕೆಯ ಮೇಲಿದ್ದ ಕಾರ್ಯಕ್ರಮ ನಿರೂಪಕ ಬಹು ಪರಾಕ್ ಹೇಳುತ್ತಲೇ ಇದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನನ್ನ ಬಳಿ ತಗ್ಗಿ ಬಗ್ಗಿ ಇರಬೇಕು, ಬೇರೆಯವರ ಜತೆಗಿದ್ದಂತೆ ಇದ್ದರೆ ಆಗುವುದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಮಾತು

Published on: Nov 07, 2024 03:12 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.