AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಟಿಸಿಎಲ್ ನೌಕರ ಸಂಘದ ವಜ್ರಮಹೋತ್ಸವ: ಸಮಾಜಕ್ಕೆ ನೀವು ಬೆಳಕಾಗಿದ್ದೀರಿ ಎಂದ ಶಿವಕುಮಾರ್

ಕೆಪಿಟಿಸಿಎಲ್ ನೌಕರ ಸಂಘದ ವಜ್ರಮಹೋತ್ಸವ: ಸಮಾಜಕ್ಕೆ ನೀವು ಬೆಳಕಾಗಿದ್ದೀರಿ ಎಂದ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 18, 2025 | 4:06 PM

Share

ತಮ್ಮ ಭಾಷಣದಲ್ಲಿ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಮತ್ತು ತನಗೆ ಕೆಪಿಟಿಸಿಎಲ್ ನೌಕರರು ತೋರಿರುವ ಪ್ರೀತಿಗೆ ಕೃತಜ್ಞತೆ ಸಲ್ಲಿಸುತ್ತಾರೆ. ವೇದಿಕೆ ಮೇಲೆ ಬೆಳಗಿಸಿದ ದೀಪವನ್ನು ಉಲ್ಲೇಖಿಸುತ್ತಾ ಶಿವಕುಮಾರ್, ದೀಪವನ್ನೇನೋ ನಾವು ಬೆಳಗಿಸಿದ್ದೇವೆ, ಅದರೆ ದೀಪ ಚೆಲ್ಲುವ ಬೆಳಕು ನೀವು, ವಿದ್ಯುಚ್ಛಕ್ತಿ ಇಲಾಖೆಯ ನೌಕರರಾಗಿ ನೀವು ಇಡೀ ಸಮಾಜಕ್ಕೆ ಬೆಳಕು ನೀಡುತ್ತಿರುವಿರಿ ಎಂದು ಹೇಳಿದಾಗ ಮತ್ತೊಮ್ಮೆ ಚಪ್ಪಾಳೆ, ಶಿಳ್ಳೆ.

ಬೆಂಗಳೂರು, ಜೂನ್ 18: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ (Diamond Jubilee Celebration) ಹಿಂದಿನ ಇಂಧನ ಸಚಿವ ಮತ್ತು ಈಗಿಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ನೌಕರರಿಂದ ಭಾರೀ ಕರತಾಡನದ ಸ್ವಾಗತ ಸಿಕ್ಕಿತು. ನಿರೂಪಕರು ಶಿವಕುಮಾರ್ ಹೆಸರು ಉಲ್ಲೇಖಿಸುತ್ತಿದ್ದಂತೆ ಕೆಪಿಟಿಸಿಎಲ್ ನೌಕರರಲ್ಲಿ ವಿದ್ಯುತ್ ಸಂಚಾರ, ಜೋರು ಚಪ್ಪಾಳೆ ಮತ್ತು ಕೇಕೆಗಳೊಂದಿಗೆ ಸ್ವಾಗತ. ವೇದಿಕೆಯ ಮೇಲೆ ಬಿಸಿ ಬಿಸಿ ಕಾಫಿ ಹೀರುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಕದಲ್ಲಿ ಕೂತಿದ್ದ ಶಿವಕುಮಾರ್ ಮುಖದಲ್ಲಿ ಮಂದಹಾಸ ಮತ್ತು ಅವ್ಯಕ್ತ ಹೆಮ್ಮೆ! ನಗರದ ಅರಮನೆ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ:    ಐಶ್ವರ್ಯ ಗೌಡ ವಂಚನೆ ಪ್ರಕರಣ ಮತ್ತು ಡಿಕೆ ಸುರೇಶ್ ನಡುವೆ ಯಾವುದೇ ಸಂಬಂಧವಿಲ್ಲ: ಡಿಕೆ ಶಿವಕುಮಾರ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More