ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​: ಹೂವಿನ ವ್ಯಾಪಾರ ಬಲು ಜೋರು

Updated on: Mar 26, 2026 | 11:39 AM

ಶ್ರೀರಾಮ ನವಮಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ.ಆರ್. ಮಾರುಕಟ್ಟೆ ಜನಸಂದಣಿಯಿಂದ ತುಂಬಿ ಹೋಗಿದೆ. ಹೂವಿನ ಖರೀದಿಗೆ ಬಂದ ಜನರಿಂದ ಕಾಲಿಡಲು ಸಹ ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹಬ್ಬಕ್ಕಾಗಿ ನಗರದ ಜನರು ಉತ್ಸಾಹದಿಂದ ಹೂವುಗಳನ್ನು ಖರೀದಿಸುತ್ತಿದ್ದು, ಮಾರುಕಟ್ಟೆಯಲ್ಲಿ ಭಾರಿ ವ್ಯಾಪಾರ ಭರಾಟೆ ಕಂಡುಬಂದಿದೆ.

ಬೆಂಗಳೂರು, ಮಾರ್ಚ್​​ 26: ಶ್ರೀರಾಮ ನವಮಿ ಹಬ್ಬದ ಹಿನ್ನೆಲೆಯಲ್ಲಿ ಕೆ.ಆರ್. ಮಾರುಕಟ್ಟೆ ಜನರಿಂದ ತುಂಬಿ ತುಳುಕುತ್ತಿದೆ. ಹಬ್ಬದ ಆಚರಣೆಗಾಗಿ ಜನರು ದೊಡ್ಡ ಸಂಖ್ಯೆಯಲ್ಲಿ ಹೂವುಗಳನ್ನು ಖರೀದಿಸಲು ಆಗಮಿಸುತ್ತಿದ್ದು, ಮಾರುಕಟ್ಟೆಯಲ್ಲಿ ಕಾಲಿಡಲು ಸಹ ಜಾಗವಿಲ್ಲದಷ್ಟು ಜನಸಂದಣಿ ಉಂಟಾಗಿದೆ. ಶ್ರೀರಾಮ ನವಮಿ ಪ್ರಯುಕ್ತ ಕೆ.ಆರ್. ಮಾರುಕಟ್ಟೆ ಸಂಪೂರ್ಣ ಜನಜಂಗುಳಿಯಿಂದ ಕೂಡಿದ್ದು, ಹೂವಿನ ವ್ಯಾಪಾರ ಭರಾಟೆ ಜೋರಾಗಿದೆ. ನಗರದ ಜನರು ಹಬ್ಬಕ್ಕೆ ಬೇಕಾದ ಹೂವುಗಳನ್ನು ಖರೀದಿಸಲು ಮುಗಿಬಿದ್ದಿದ್ದಾರೆ. ಈ ವರ್ಷ ಶ್ರೀರಾಮ ನವಮಿಗಾಗಿ ಹೂವಿನ ಬೇಡಿಕೆ ಹೆಚ್ಚಾಗಿದ್ದು, ಮಾರುಕಟ್ಟೆಯಲ್ಲಿ ವಿಪರೀತ ಜನಸಂದಣಿಗೆ ಕಾರಣವಾಗಿದೆ.

ವರದಿ: ಅರುಣ್​​ ಕುಮಾರ್​​, ಟಿವಿ9 ಬೆಂಗಳೂರು

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Published on: Mar 26, 2026 11:38 AM
Follow Us
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More