‘ಯಶ್ ಈಗಾಗಲೇ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಟಾಕ್ಸಿಕ್ ಬಗ್ಗೆ ಅಜಯ್ ರಾವ್ ಮಾತು

Edited By:

Updated on: Aug 10, 2026 | 8:32 PM

ಕನ್ನಡ ಚಿತ್ರರಂಗದಿಂದ ಶುರುವಾದ ಯಶ್ ಅವರ ಸಿನಿಮಾ ಜರ್ನಿ ಈಗ ಜಾಗತಿಕ ಮಟ್ಟಕ್ಕೆ ತಲುಪಿದೆ. ಬಿಡುಗಡೆಗೆ ಸಜ್ಜಾಗಿರುವ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಖ್ಯಾತ ನಟ ಕೃಷ್ಣ ಅಜಯ್ ರಾವ್ ಅವರು ಯಶ್ ಸಾಧನೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ವಿಡಿಯೋ ನೋಡಿ..

ಕನ್ನಡ ಚಿತ್ರರಂಗದಿಂದ ಶುರುವಾದ ಯಶ್ ಅವರ ಸಿನಿಮಾ ಜರ್ನಿ ಈಗ ಜಾಗತಿಕ ಮಟ್ಟಕ್ಕೆ ತಲುಪಿದೆ. ಬಿಡುಗಡೆಗೆ ಸಜ್ಜಾಗಿರುವ ‘ಟಾಕ್ಸಿಕ್’ (Toxic) ಸಿನಿಮಾ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಖ್ಯಾತ ನಟ ಕೃಷ್ಣ ಅಜಯ್ ರಾವ್ ಅವರು ಯಶ್ ಸಾಧನೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ‘ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಮೇಲೆ ನನಗೂ ನಿರೀಕ್ಷೆ ಇದೆ. ನಿರೀಕ್ಷೆಗಿಂತ ಜಾಸ್ತಿ ಭರವಸೆ ಇದೆ. ಅವರು ಮಾಡಿದ್ದೆಲ್ಲವೂ ಕೈ ಹಿಡಿದಿದೆ. ಅವರ ವಿಷನ್​ಗೆ ಹ್ಯಾಟ್ಸ್​ ಆಫ್. ರಾಜ್ಯ, ದೇಶ ಗೆದ್ದಾಗಿದೆ. ಈಗ ವಿಶ್ವದ ಕಡೆಗೆ ಹೊರಟಿದ್ದಾರೆ. ಅಲ್ಲಿಯೂ ಗೆಲ್ಲುತ್ತಾರೆ ಎಂಬ ನಂಬಿಕೆ ನನಗೆ ಇದೆ. ಅದು ದೊಡ್ಡ ವಿಚಾರ ಅಂತ ನನಗೆ ಅನಿಸುತ್ತಿಲ್ಲ. ಯಾಕೆಂದರೆ, ನಾವು ನೋಡುತ್ತಾ ಇರುತ್ತೇವೆ. ವಿಶ್ವ ಗೆದ್ದ ಬಳಿಕ ಅವರು ಏನು ಮಾಡುತ್ತಾರೋ ಗೊತ್ತಿಲ್ಲ’ ಎಂದು ಕೃಷ್ಣ ಅಜಯ್ ರಾವ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us