ತುಂಬ ಸಾಲ ಮಾಡಿದ್ದೇನೆ, ಎಲ್ಲವನ್ನೂ ಅಡ ಇಟ್ಟಿದ್ದೇನೆ: ಪರಿಸ್ಥಿತಿ ತಿಳಿಸಿದ ಅಜಯ್ ರಾವ್

| Updated By: ಮದನ್​ ಕುಮಾರ್​

Updated on: Apr 03, 2025 | 10:48 PM

‘ಯುದ್ಧಕಾಂಡ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದಲ್ಲಿ ಅಜಯ್ ರಾವ್ ಅವರು ನಟಿಸಿ, ನಿರ್ಮಾಣವನ್ನೂ ಮಾಡಿದ್ದಾರೆ. ಸಿನಿಮಾಗಾಗಿ ಅವರು ಸಾಲ ಮಾಡಿದ್ದಾರೆ. ಆ ಕುರಿತು ಟಿವಿ9 ಜೊತೆ ಮಾತನಾಡಿದ್ದಾರೆ. ‘ಇಂದಿಗೂ ರಿಲೀಸ್​ ಹಾಗೂ ಪ್ರಚಾರಕ್ಕಾಗಿ ಕೈ ಚಾಚುತ್ತಿದ್ದೇನೆ. ಅದು ಇನ್ನೂ ಮುಗಿದಿಲ್ಲ’ ಎಂದು ಅಜಯ್ ರಾವ್ ಹೇಳಿದ್ದಾರೆ.

ನಟ ಅಜಯ್ ರಾವ್ ಅವರು ‘ಯುದ್ಧಕಾಂಡ’ (Yuddhakaanda) ಸಿನಿಮಾದಲ್ಲಿ ನಟಿಸಿದ್ದಾರೆ. ಅಲ್ಲದೇ, ಈ ಸಿನಿಮಾಗೆ ಅವರು ಬಂಡವಾಳ ಕೂಡ ಹೂಡಿದ್ದಾರೆ. ಈ ಚಿತ್ರಕ್ಕಾಗಿ ಅವರು ಸಾಕಷ್ಟು ಸಾಲ ಮಾಡಿಕೊಂಡಿದ್ದಾರೆ. ಆ ಬಗ್ಗೆ ಅಜಯ್ ರಾವ್ (Ajay Rao) ಮಾತನಾಡಿದ್ದಾರೆ. ‘ಸಾಲ ಮಾಡಿ ಸಿನಿಮಾಗೆ ಹಾಕಿದ್ದೇನೆ. ಇದು ಬಿಟ್ಟರೆ ನಾನು ಏನನ್ನೂ ಪ್ರೀತಿಸಿಲ್ಲ. ರವಿಚಂದ್ರನ್ ಅವರು ನನಗೆ ಸ್ಫೂರ್ತಿ. ನಾನು ಕೆಟ್ಟ ಉದ್ದೇಶಕ್ಕೆ ಹಣ ಹಾಳು ಮಾಡಿಲ್ಲ. ಒಳ್ಳೆಯ ಸಿನಿಮಾ ಮಾಡಬೇಕು ಎಂಬ ಒಳ್ಳೆಯ ಉದ್ದೇಶದಿಂದ ಖರ್ಚು ಮಾಡಿದ್ದೇನೆ. ತುಂಬ ಸಾಲ ಮಾಡಿದ್ದೇನೆ. ಎಲ್ಲವನ್ನೂ ಅಡ ಇಟ್ಟಿದ್ದೇನೆ’ ಎಂದಿದ್ದಾರೆ ಅಜಯ್ ರಾವ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.