Karnataka Assembly Polls: ಬ್ಯಾಟರಾಯನಪುರ ಕ್ಷೇತ್ರದ ಚುನಾವಣಾಧಿಕಾರಿಗಳ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ಶಾಸಕ ಕೃಷ್ಣ ಭೈರೇಗೌಡ ದೂರು

Updated on: Mar 30, 2023 | 5:58 PM

ಸರ್ಕಾರದ ಪರ ಕೆಲಸ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ಜನಪ್ರತಿನಿಧಿಗಳ ಕಾಯ್ದೆಯಡಿ ಮೊಕದ್ದಮೆ ದಾಖಲಿಸುವ ಬಗ್ಗೆ ಎಚ್ಚರಿಕೆಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ನೀಡಿದ್ದೇವೆ ಎಂದು ಭೈರೇಗೌಡ ಹೇಳಿದರು.

ಬೆಂಗಳೂರು: ನಗರದ ಬ್ಯಾಟರಾಯನಪುರದ ಕಾಂಗ್ರೆಸ್ ಶಾಸಕ ಕೃಷ್ಣ ಭೈರೇಗೌಡ (Krishna Byre Gowda) ಇಂದು ತಮ್ಮ ಕ್ಷೇತ್ರದ ಚುನಾವಣಾ ಅಧಿಕಾರಿಗಳ ವಿರುದ್ಧವೇ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ (Manoj Kumar Meena) ಅವರಿಗೆ ದೂರು ಸಲ್ಲಿಸಿದರು. ಅವರ ಕ್ಷೇತ್ರದಲ್ಲಿ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಕೆಎಮ್ ಮುನೀಂದ್ರ ಕುಮಾರ್ ಮತದಾರಿಗೆ ಹಂಚಲು ಗೋದಾಮೊಂದರಲ್ಲಿ ಸಂಗ್ರಹಿಸಿಟ್ಟಿದ್ದ ರೂ. 3.6 ಕೋಟಿ ಮೌಲ್ಯದ ವಸ್ತುಗಳು ಕೇಂದ್ರ ಜಿಎಸ್ ಟಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಪತ್ತೆಯಾದರೂ ಸ್ಥಳೀಯ ಚುನಾವಣಾಧಿಕಾರಿಗಳು ಕುಮಾರ್ ವಿರುದ್ಧ ದೂರು ಕೂಡ ದಾಖಲಿಸಿಕೊಳ್ಳದೆ ಎಂಕ, ಸೀನ ನಾಣಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಬೈರೇಗೌಡ ಹೇಳಿದರು. ಗೋದಾಮಿನಲ್ಲಿ ಬರಾಮತ್ತಾದ ವಸ್ತುಗಳ ಮೇಲೆ ಮುನೀಂದ್ರ ಕುಮಾರ ಫೋಟೋ ಕೂಡ ಇದೆ ಎಂದ ಶಾಸಕರು, ಸರ್ಕಾರದ ಪರ ಕೆಲಸ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ಜನಪ್ರತಿನಿಧಿಗಳ ಕಾಯ್ದೆಯಡಿ ಮೊಕದ್ದಮೆ ದಾಖಲಿಸುವ ಬಗ್ಗೆ ಎಚ್ಚರಿಕೆಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ನೀಡಿದ್ದೇವೆ ಎಂದು ಭೈರೇಗೌಡ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 30, 2023 05:58 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More