ಬಿಜೆಪಿ ಸೇರುವ ಯೋಚನೆಯಿಲ್ಲ ಆದರೆ ಅವರು ಬಯಸಿದರೆ ಹೊಂದಾಣಿಕೆಗೆ ಸಿದ್ಧನಿದ್ದೇನೆ: ಗಾಲಿ ಜನಾರ್ಧನ ರೆಡ್ಡಿ, ಶಾಸಕ

ಅರುಣ್​ ಕುಮಾರ್​ ಬೆಳ್ಳಿ

Updated on: Jan 29, 2024 | 11:35 AM

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಬೇಕೆನ್ನುವ ಆಸೆ ತನ್ನಲ್ಲೂ ಇದೆ, ಹಾಗಾಗಿ ಬಿಜೆಪಿ ಬಯಸಿದರೆ ಪಕ್ಷದ ಜೊತೆ ತಾನು ಹೊಂದಾಣಿಕೆ ಮಾಡಿಕೊಳ್ಳಲು ತಯಾರಿದ್ದೇನೆ ಎಂದು ರೆಡ್ಡಿ ಹೇಳಿದರು.

ಕೊಪ್ಪಳ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ (Gali Janardhan Reddy) ಅವರು ಬಿಜೆಪಿಗೆ ವಾಪಸ್ಸು ಹೋಗಲಿದ್ದಾರೆಂಬ ವದಂತಿ ಕಳೆದ ವಾರದಿಂದ ಹಬ್ಬಿದೆ. ಅದಕ್ಕೆ ಪುಷ್ಠಿ ನೀಡುವ ಹೇಳಿಕೆಗಳನ್ನು ಖುದ್ದು ಜನಾರ್ಧನ ರೆಡ್ಡಿ ಮತ್ತು ಅವರ ಸಹೋದರ ಗಾಲಿ ಸೋಮಶೇಖರ ರೆಡ್ಡಿ (Gali Somashekhar Reddy) ನೀಡಿದ್ದರು. ಇವತ್ತು ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜನಾರ್ಧನ ರೆಡ್ಡಿ, ಬಿಜೆಪಿ ಸೇರುವ ಬಯಕೆ ವ್ಯಕ್ತಪಡಿಸಿಲ್ಲ ಆದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧನಿರುವುದಾಗಿ ಹೇಳಿದರು. ನರೇಂದ್ರ ಮೋದಿಯವರು (PM Narendra Modi) ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಬೇಕೆನ್ನುವ ಆಸೆ ತನ್ನಲ್ಲೂ ಇದೆ, ಹಾಗಾಗಿ ಬಿಜೆಪಿ ಬಯಸಿದರೆ ಪಕ್ಷದ ಜೊತೆ ತಾನು ಹೊಂದಾಣಿಕೆ ಮಾಡಿಕೊಳ್ಳಲು ತಯಾರಿದ್ದೇನೆ ಎಂದು ರೆಡ್ಡಿ ಹೇಳಿದರು. ಹೊಂದಾಣಿಕೆ ನಡೆಯದೇ ಹೋದರೂ ಲೋಕಸಭಾ ಚುನಾವಣೆಯಲ್ಲಿ ತನ್ನ ಪಕ್ಷದ ಅಭ್ಯರ್ಥಿಗಳು ಗೆದ್ದರೆ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಬೆಂಬಲ ನೀಡುವುದಾಗಿ ಜನಾರ್ಧನ ರೆಡ್ಡಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.