ಜುಲೈ ತಿಂಗಳಲ್ಲೇ ತಮಿಳುನಾಡುಗೆ 100 ಟಿಎಂಸಿ ಹರಿಬಿಟ್ಟು ದಾಖಲೆ ನಿರ್ಮಿಸಿದ ಕೆಅರ್​ಎಸ್ ಮತ್ತು ಕಬಿನಿ ಜಲಾಶಯಗಳು

Updated on: Jul 22, 2025 | 10:25 AM

ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಕಾರಣ ಕಬಿನಿ ಮತ್ತು ಕೆಆಎರ್​ಎಸ್ ಜಲಾಶಯಗಳು ತುಂಬಿ ತುಳುಕುತ್ತಿವೆ. ಮಂಡ್ಯ ಜಿಲ್ಲೆಯ ರೈತರು ಸಂತಸದಲ್ಲಿದ್ದಾರೆ ಮತ್ತು ರಾಜಕೀಯ ನಾಯಕರಿಗೂ ತಲೆಬಿಸಿ ಇಲ್ಲ. ಮತ್ತೊಂದು ಸಂತಸದ ಸಂಗತಿಯೆಂದರೆ ಎಲ್ಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದ್ದರೂ ಎಲ್ಲೂ ಪ್ರವಾಹದಂಥ ಸ್ಥಿತಿ ತಲೆದೋರಿಲ್ಲ. ಅಲ್ಲಲ್ಲಿ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿರುವುದು ನಿಜ, ಆದರೆ ಗಂಭೀರ ಪರಿಸ್ಥಿತಿ ತಲೆದೋರಿಲ್ಲ.

ಮಂಡ್ಯ, ಜುಲೈ 22: ಕೃಷ್ಣರಾಜಸಾಗರ ಜಲಾಶಯ ಈ ವರ್ಷ ಒಂದಾದ ಮೇಲೊಂದರಂತೆ ದಾಖಲೆ ನಿರ್ಮಿಸುತ್ತಿದೆ. ಕೆಆರ್​ಎಸ್ ಡ್ಯಾಂ ಜೂನ್ ತಿಂಗಳಲ್ಲೇ ಭರ್ತಿಯಾಗಿ ದಾಖಲೆ ನಿರ್ಮಿಸಿದ್ದು ಒಂದು ಭಾಗವಾದರೆ ಈ ಡ್ಯಾಂ ಮತ್ತು ಕಬಿನಿ ಜಲಾಶಯದಿಂದ (Kabini Reservoir) ತಮಿಳುನಾಡಿಗೆ ಈಗಾಗಲೇ 100 ಟಿಎಂಸಿ ನೀರು ಹರಿಬಿಡಲಾಗಿದೆ. ಹಿಂದೆ ಯಾವತ್ತೂ ಇಂಥದೊಂದು ಘಟನೆ ಸಂಭವಿಸಿರಲಿಲ್ಲ. ನೆರೆರಾಜ್ಯದೊಂದಿಗೆ ಆಗಿರುವ ಒಪ್ಪಂದ ಪ್ರಕಾರ ಮಾನ್ಸೂನ್ ಸೀಸನ್​ನಲ್ಲಿ 177 ಟಿಎಂಸಿ ನೀರು ಬಿಡಬೇಕು. ಈ ವರ್ಷ ಜೂನ್ ಮತ್ತು ಜುಲೈ ಎರಡು ತಿಂಗಳಲ್ಲೇ 100 ಕ್ಕೂ ಹೆಚ್ಚು ಟಿಎಂಸಿ ನೀರನ್ನು ತಮಿಳುನಾಡುಗೆ ಹರಿಸಲಾಗಿದೆ.

ಇದನ್ನೂ ಓದಿ: ಮೂರೇ ದಿನಕ್ಕೆ 9 ಅಡಿ ಭರ್ತಿಯಾದ ಕೆಆರ್​ಎಸ್ ಡ್ಯಾಂ​: ಆಲಮಟ್ಟಿ ಸೇರಿ ಉಳಿದ ಜಲಾಶಯಗಳಿಗೂ ಭಾರಿ ಒಳಹರಿವು

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More