ಕಾವೇರಿಯಲ್ಲಿ ತೀರ್ಥೋದ್ಭವ ಆಗುತ್ತಿದ್ದಂತೆ ಮತ್ತೊಮ್ಮೆ ಗರಿಷ್ಠ ಮಟ್ಟ ತಲುಪಿದ ಕೆಆರ್​ಎಸ್

ಅರುಣ್​ ಕುಮಾರ್​ ಬೆಳ್ಳಿ

Updated on: Oct 17, 2024 | 10:30 AM

ಪ್ರಸಕ್ತ ಮಾನ್ಸೂನ್ ಸೀಸನ್​ನಲ್ಲಿ ಉತ್ತಮ ಮಳೆಯ ಕಾರಣ ಸಂತುಷ್ಟಿಯಿಂದ ಬೀಗುತ್ತಿರುವ ರೈತ ಕೆಅರ್​​ಎಸ್ ಜಲಾಶಯ ಈ ವರ್ಷ ಮೂರನೇ ಸಲ ಭರ್ತಿಯಾಗಿರುವುದನ್ನು ಕಂಡು ಮತ್ತಷ್ಟು ಸಂತಸಭರಿತನಾಗಿದ್ದಾನೆ ಮತ್ತು ವರುಣ ದೇವನಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಾನೆ.

ಮಂಡ್ಯ: ಇಂದು ಬೆಳಗ್ಗೆ 7.40 ಕ್ಕೆ ಕೊಡಗು ಜಿಲ್ಲೆ ಭಾಗಮಂಡಲದ ಹತ್ತಿರವಿರುವ ತಲಕಾವೇರಿಯಲ್ಲಿ ಅರ್ಚಕರ ಸಮ್ಮುಖ ಮತ್ತು ಸಾವಿರಾರು ಭಕ್ತರ ಜಯಘೋಷಗಳ ರೋಮಾಂಚನದೊಂದಿಗೆ ತೀರ್ಥೋದ್ಭವ ಸಂಭವಿಸಿದೆ. ಅದು ಸರಿ, ಇಲ್ನೋಡಿ ಮಂಡ್ಯ ಜಿಲ್ಲೆ ಮತ್ತು ಸುತ್ತಮುತ್ತ ಭಾಗಗಳ ಜೀವನಾಡಿ ಕೆಅರ್​ಎಸ್ ಡ್ಯಾಂ ಸಹ ತುಂಬಿ ತುಳುಕುತ್ತಿದೆ. ನಿಮಗೆ ಗೊತ್ತಿರುವ ಹಾಗೆ ಜಲಾಶಯ ಗರಿಷ್ಠ ಮಟ್ಟ 124.80 ಅಡಿಯಾಗಿದ್ದು ನೀರು ಈ ಮಟ್ಟವನ್ನು ತಲುಪಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಕಾವೇರಿ ತೀರ್ಥೋದ್ಭವ: ಆ ದಿವ್ಯ ಕ್ಷಣ ಹೇಗಿತ್ತು ನೋಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.