ತಮಿಳುನಾಡಿನ ನೀರಿನ ದಾಹ ತಣಿಸಿದ ಕಾವೇರಿ, ಜಲ ಮಾಪನ ಕೇಂದ್ರದ ಬಳಿ ನೀರು ಹರಿಯುವ ದೃಶ್ಯ ಟಿವಿ9ಗೆ ಲಭ್ಯ

ಕೊಡಗಿನಲ್ಲಿ ಭಾರೀ ಮಳೆಯ( kodagu Rain) ಪರಿಣಾಮವಾಗಿ ಕೃಷ್ಣರಾಜ ಸಾಗರ( KRS Dam) ಅತಿ ಬೇಗನೇ ತುಂಬುವ ಹಂತಕ್ಕೆ ಬಂದಿದೆ. ಹೌದು.. ಕಾವೇರಿ ಕೊಳ್ಳದಲ್ಲಿ ಅಪಾರ ಮಳೆ ಹಿನ್ನಲೆ ಕಬಿನಿ, ಕೆಆರ್​ಎಸ್​ನಿಂದ ಅಪಾರ ಪ್ರಮಾಣದಲ್ಲಿ ನೀರು ಹೊರಗೆ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಕಾವೇರಿ ತಮಿಳುನಾಡಿನ ದಾಹ ತಣಿಸಿದ್ದಾಳೆ.

ತಮಿಳುನಾಡಿನ ನೀರಿನ ದಾಹ ತಣಿಸಿದ ಕಾವೇರಿ, ಜಲ ಮಾಪನ ಕೇಂದ್ರದ ಬಳಿ ನೀರು ಹರಿಯುವ ದೃಶ್ಯ ಟಿವಿ9ಗೆ ಲಭ್ಯ
| Updated By: ರಮೇಶ್ ಬಿ. ಜವಳಗೇರಾ

Updated on:Jul 21, 2024 | 6:01 PM

ಚಾಮರಾಜನಗರ, (ಜುಲೈ 21): ಕಾವೇರಿ ಕೊಳ್ಳದಲ್ಲಿ ಅಪಾರ ಮಳೆಯಾಗುತ್ತಿರುವುದರಿಂದ ಕೆಆರ್​ಎಸ್​ ಜಲಾಶಯ ತುಂಬುವ ಹಂತಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿದೆ. ತಮಿಳುನಾಡಿಗೆ ಎಷ್ಟು ನೀರು ಬಿಟ್ಟಿದ್ದೇವೆಂಬ ಅಳತೆ ಗೋಲು ಉಳ್ಳ ಹೊಗೆನಕಲ್ ಸಮೀಪವಿರುವ ಬಿಳಿಗುಂಡ್ಲು ಬಳಿ ಇದೆ. ಈ ಜಲ ಮಾಪನ ಕೇಂದ್ರದ ಬಳಿ ನೀರು ಹರಿದು ಹೋಗುತ್ತಿದೆ. ಇನ್ನು ಬಿಳಿಗುಂಡ್ಲು ಜಲ ಮಾಪನ ಕೇಂದ್ರದ ಬಳಿ ನೀರು ಹರಿಯುವ ದೃಶ್ಯ ಟಿವಿ9ಗೆ ಲಭ್ಯವಾಗಿದೆ.

ಭಾನುವಾರ ಬೆಳಿಗ್ಗೆ ನಂತರ ಕೆಆರ್‌ಎಸ್‌ ಜಲಾಶಯದಿಂದ ಕಾವೇರಿ ನದಿ ಮೂಲಕ ಹೊರ ಹರಿವಿನ ಪ್ರಮಾಣವನ್ನು ಐವತ್ತು ಸಾವಿರ ಕ್ಯೂಸೆಕ್‌ಗೆ ಏರಿಸಲಾಗಿದೆ. ಇದರಿಂದ ಹೆಚ್ಚಿನ ನೀರು ನದಿ ಮೂಲಕ ಹೋಗುತ್ತಿದೆ. ಜಲಾಶಯಕ್ಕೆ ಇನ್ನೂ ಎರಡು ಮೂರು ದಿನ ಭಾರೀ ಪ್ರಮಾಣದಲ್ಲಿ ಕೆಆರ್‌ಎಸ್‌ ಜಲಾಶಯಕ್ಕೆ ಬರುವ ನಿರೀಕ್ಷೆ ಇರುವುದರಿಂದ ಹೊರ ಹರಿವಿನ ಪ್ರಮಾಣವೂ ಗಣನೀಯವಾಗಿ ಏರಿಕೆಯಾಗಲಿದೆ. ಈ ಮೂಲಕ ಕಾವೇರಿ ತಮಿಳುನಾಡಿನ ನೀರಿನ ದಾಹ ತಣಿಸಿದ್ದಾಳೆ.

ಮೊನ್ನೆ ಅಷ್ಟೇ ತಮಿಳುನಾಡು ಕಾವೇರಿ ನೀರು ಹರಿಸುತ್ತಿಲ್ಲ ಎಂದು ಕಾವೇರಿ ಪಾಧಿಕಾರದ ಮುಂದೆ ವಾದ ಮಂಡಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಾಧಿಕಾರವು ಜುಲೈ ಅಂತ್ಯದ ವರಗೆ ಪ್ರತಿ ದಿನ 1 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿತ್ತು. ಆದ್ರೆ, ಇತ್ತ ಸಿಎಂ ಸಿದ್ದರಾಮಯ್ಯ ಪ್ರತಿಪಕ್ಷಗಳ ಸಭೆ ನಡೆಸಿ ಅಷ್ಟೊಂದು ನೀಡು ಬಿಡಲು ಆಗುವುದಿಲ್ಲ ದಿನಕ್ಕೆ 8 ಸಾವಿರ ಕ್ಯೂಸೆಕ್​​ ನೀರು ಮಾತ್ರ ಬಿಡಬಹುದು ಎಂದು ತೀರ್ಮಾನ ಕೈಗೊಂಡಿದ್ದರು. ಆದ್ರೆ, ಇದೀಗ ಮಳೆ ಹೆಚ್ಚಾಗಿರುವುದರಿಂದ ಕಾವೇರಿಯ ಒಡಲು ಬಹುತೇಕ ಭರ್ತಿಯಾಗಿದೆ, ಹೀಗಾಗಿ ಕಾವೇರಿ ತಮಿಳುನಾಡಿಗೆ ಹರಿದು ಹೋಗುತ್ತಿದ್ದಾಳೆ.

Published On - 1:54 pm, Sun, 21 July 24

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ