ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆ ಒಪ್ಪದ ಸಿಎಂ ಸಿದ್ದರಾಮಯ್ಯ ನಿಲುವನ್ನು ಸ್ವಾಗತಿಸಿದ ಕೆಎಸ್ ಈಶ್ವರಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: Feb 02, 2024 | 12:06 PM

ಸಿದ್ದರಾಮಯ್ಯ ಅವರು ಸುರೇಶ್ ಹೇಳಿರುವುದನ್ನು ಒಪ್ಪಿಲ್ಲ ಓಕೆ; ಅದರೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಸೋನಿಯ ಗಾಂಧಿ ಏನು ಹೇಳುತ್ತಾರೆ ಅನೋದು ಬಹಳ ಮುಖ್ಯ, ಅವರ ಅಭಿಪ್ರಾಯಗಳನ್ನು ದೇಶದ ಮುಂದೆ ಇಡಬೇಕು ಎಂದು ಈಶ್ವರಪ್ಪ ಹೇಳಿದರು.

ಶಿವಮೊಗ್ಗ: ಫಾರ್ ಎ ಚೇಂಜ್, ಹಿರಿಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ತಮ್ಮ ಬದ್ಧವೈರಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಇಂದು ನಗರದಲ್ಲಿ ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಮಾಜಿ ಸಚಿವ, ಪ್ರತ್ಯೇಕ ದಕ್ಷಿಣ ಭಾರತ ದೇಶದ ಬಗ್ಗೆ ಸಂಸದ ಡಿಕೆ ಸುರೇಶ್ (DK Suresh) ಮಾತಾಡಿರುವುದನ್ನು ಸಿದ್ದರಾಮಯ್ಯ ಒಪ್ಪಿಲ್ಲ, ಅವರ ನಿಲುವನ್ನು ತಾನು ಸ್ವಾಗತಿಸುವುದಾಗಿ ಹೇಳಿದರು. ಸುರೇಶ್ ಮತ್ತು ಡಿಕೆ ಶಿವಕುಮಾರ್ ಜಿನ್ನಾ ಸಂಸ್ಕೃತಿಯ ಪ್ರತಿಪಾದಕರಾಗಿದ್ದಾರೆ, ಭಾರತ ಎರಡು ಹೋಳಾಗಿ ಹಿಂದೂಸ್ತಾನ-ಪಾಕಿಸ್ತಾನ ಅಗಿದ್ದು ಅವರಿಗೆ ಸಮಾಧಾನವಾಗಿಲ್ಲ, ಭಾರತೀಯರೆಲ್ಲ ಇನ್ನೂ ಆ ನೋವಿನಿಂದ ಹೊರಬಂದಿಲ್ಲ, ಅದರೆ ಇವರು ದೇಶವನ್ನು ಮತ್ತಷ್ಟು ಒಡೆಯುವ ಹುನ್ನಾರ ಮಾಡಿದಂತಿದೆ ಎಂದು ಈಶ್ವರಪ್ಪ ಹೇಳಿದರು. ಸಿದ್ದರಾಮಯ್ಯ ಅವರು ಸುರೇಶ್ ಹೇಳಿರುವುದನ್ನು ಒಪ್ಪಿಲ್ಲ ಓಕೆ; ಅದರೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಸೋನಿಯ ಗಾಂಧಿ ಏನು ಹೇಳುತ್ತಾರೆ ಅನೋದು ಬಹಳ ಮುಖ್ಯ, ಅವರ ಅಭಿಪ್ರಾಯಗಳನ್ನು ದೇಶದ ಮುಂದೆ ಇಡಬೇಕು ಎಂದು ಈಶ್ವರಪ್ಪ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.