ಚಲಿಸುತ್ತಿದ್ದ KSRTC ಬಸ್ನ ಆಕ್ಸೆಲ್ ಕಟ್: ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರೀ ದುರಂತ
ಚಾಮರಾಜನಗರ ಜಿಲ್ಲೆಯ ತ್ರಯಂಬಕಪುರ ಗೇಟ್ ಬಳಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಆಕ್ಸೆಲ್ ತುಂಡಾದ ಘಟನೆ ನಡೆದಿದೆ. ಚಾಮರಾಜನಗರದಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಬಸ್ನ ಆಕ್ಸೆಲ್ ಕಟ್ ಆಗಿದ್ದು, ದೊಡ್ಡ ದುರಂತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಮಾರ್ಗ ಮಧ್ಯೆಯೇ ಬಸ್ ನಿಂತ ಪರಿಣಾಮ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ಪರದಾಡಿದ್ದಾರೆ. ಬಸ್ ನಿರ್ವಹಣೆ ಬಗ್ಗೆ ಸಾರಿಗೆ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಚಾಮರಾಜನಗರ, ಫೆಬ್ರವರಿ 10: ಜಿಲ್ಲೆಯ ತ್ರಯಂಬಕಪುರ ಗೇಟ್ ಬಳಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಆಕ್ಸೆಲ್ ಏಕಾಏಕಿ ಕಟ್ ಆಗಿದ್ದು, ಸಂಭವನೀಯ ದೊಡ್ಡ ದುರಂತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಚಾಮರಾಜನಗರದಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಸಾರಿಗೆ ಬಸ್ನ ಆಕ್ಸೆಲ್ ಮುರಿದ ಕಾರಣ ಬಸ್ ಮಾರ್ಗ ಮಧ್ಯದಲ್ಲೇ ನಿಂತಿದೆ. ಇದರಿಂದಾಗಿ ಶಾಲೆ-ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ತೀವ್ರ ತೊಂದರೆ ಅನುಭವಿಸಿದ್ದಾರೆ. ಬಸ್ಗಳ ಸ್ಥಿತಿಗತಿಯನ್ನು ಪರಿಶೀಲಿಸದೆ ಹೇಗೆ ಡಿಪೋದಿಂದ ಹೊರಗೆ ಕಳುಹಿಸಲಾಗುತ್ತದೆ ಎಂದು ಪ್ರಯಾಣಿಕರು ಪ್ರಶ್ನಿಸಿದ್ದು, ಒಂದು ಸಣ್ಣ ಎಡವಟ್ಟಾಗಿದ್ದರೂ ಕೂಡ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ
ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ ಚಿನ್ನ, ನಗದು ಇದ್ದ ಬ್ಯಾಗ್ ಕಳವು!
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
