ಮೊಬೈಲ್ ಫೋನಲ್ಲಿ ಬಿಂದಾಸಾಗಿ ರೀಲ್ಸ್ ನೋಡುತ್ತ ಬಸ್ ಓಡಿಸಿದ ಕೆಎಸ್ಸಾರ್ಟಿಸಿ ಬಸ್ ಚಾಲಕ

ಅರುಣ್​ ಕುಮಾರ್​ ಬೆಳ್ಳಿ

Updated on: Jan 31, 2025 | 2:27 PM

ಈ ವಿಡಿಯೋ ಸುದ್ದಿಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಸಂಬಂಧಪಟ್ಟ ಕೆಎಸ್ಸಾರ್ಟಿಸಿ ಅಧಿಕಾರಿಗಳು ಬಹಳ ಸೂಕ್ಷ್ಮವಾಗಿ ಗಮನಿಸಬೇಕಿದೆ. ಇದೇ ಚಾಲಕನ ಹಾಗೆ ಮೊಬೈಲ್ ಉಪಯೋಗಿಸುತ್ತ ವಾಹನ ಓಡಿಸುವ ಅನೇಕ ಚಾಲಕರು ಸಿಗುತ್ತಾರೆ. ಅವರ ಉಡಾಫೆ ಮನೋಭಾವಕ್ಕೆ ಇಲಾಖೆ ಶಿಸ್ತಿನ ಕ್ರಮ ಜರುಗಿಸಬೇಕಿದೆ. ಅನಾಹುತ ಸಂಭವಿಸಿದ ಮೇಲೆ ಎಚ್ಚೆತ್ತುಕೊಳ್ಳುವುದರಲ್ಲಿ ಅರ್ಥವಿಲ್ಲ.

ಕೋಲಾರ: ಬೇಜವ್ದಾರಿತನ, ಪ್ರಯಾಣಿಕರ ಪ್ರಾಣದ ಬಗ್ಗೆ ನಿರ್ಲಕ್ಷ್ಯ ಮತ್ತು ವೃತ್ತಿಯೆಡೆ ಉಡಾಫೆ ಮನೋಭಾವ-ಎಲ್ಲವೂ ಮೇಳೈಸಿವೆ ಈ ಚಾಲಕನಲ್ಲಿ! ಇವನನ್ನು ಚಾಲಕ ಅಂತ ಕರೆಯೋದು ಚಾಲಕ ವೃತ್ತಿಗೆ ಅವಮಾನ. ಕೋಲಾರದಿಂದ ಪಾವಗಡ ಹೊರಟಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಪ್ರಾಯಶಃ ಕೋಲಾರ ಡಿಪೋಗೆ ಸೇರಿದ ಬಸ್ಸಲ್ಲಿ ಈ ಚಾಲಕ ಮೊಬೈಲ್​ನಲ್ಲಿ ರೀಲ್ಸ್ ನೋಡುತ್ತ ವಾಹನವನ್ನು ಓಡಿಸುತ್ತಿದ್ದಾನೆ. ಬಸ್ಸಲ್ಲಿದ್ದ ಪ್ರಯಾಣಿಕರ ಬಗ್ಗೆ ಇವನಿಗೆ ಕಾಳಜಿ, ಪರಿವೆಯೇ ಇಲ್ಲ. ಇವನ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಪ್ರಯಾಣಿಕರಿಗೆ ಏನಾದರೂ ಅಪಾಯವಾದರೆ ಹೊಣೆ ಯಾರು?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  KSRTC ಬಸ್​ ಚಾಲನೆ ವೇಳೆ ಮೊಬೈಲ್​ ಬಳಕೆ: ಚಾಲಕ ಅರೆಸ್ಟ್​

Published on: Jan 28, 2025 11:11 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.