AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲದ ಬಳಿ ಕೆಎಸ್​ಆರ್​ಟಿಸಿ ಬಸ್ಸೊಂದು ಅಪಾಯಕಾರಿಯಾಗಿ ಡಿವೈಡರ್​ಗೆ ಗುದ್ದಿ ಅದರ ಮೇಲೆ ಓಲಾಡಿದರೂ ಪ್ರಾಣಾಪಾಯಗಳಿಲ್ಲ

ನೆಲಮಂಗಲದ ಬಳಿ ಕೆಎಸ್​ಆರ್​ಟಿಸಿ ಬಸ್ಸೊಂದು ಅಪಾಯಕಾರಿಯಾಗಿ ಡಿವೈಡರ್​ಗೆ ಗುದ್ದಿ ಅದರ ಮೇಲೆ ಓಲಾಡಿದರೂ ಪ್ರಾಣಾಪಾಯಗಳಿಲ್ಲ

ಅರುಣ್​ ಕುಮಾರ್​ ಬೆಳ್ಳಿ
|

Updated on:May 18, 2024 | 2:09 PM

Share

ವಾಹನದ ಮುಂದಿನ ಟೈರ್ ಗಳು ಸಹ ಕಿತ್ತು ಬಂದಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಹೆಚ್ಚಿನ ಪ್ರಮಾಣದಲ್ಲಿ ಜಖಂಗೊಂಡಿರುವ ಬಸ್ಸನ್ನು ಕ್ರೇನ್ ಸಹಾಯದಿಂದ ಡಿವೈಡರ್ ಮೇಲಿಂದ ಎತ್ತಿರುವುದು ನಿಜ ಅದರೆ ಅದನ್ನು ಹತ್ತಿರದ ಡಿಪೋಗೆ ಟೋ ಮಾಡಿಕೊಂಡು ಹೋಗುವುದು ಸಹ ಸಾಧ್ಯವಿಲ್ಲ.

ನೆಲಮಂಗಲ: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ (KSRTC) ಸೇರಿದ ಈ ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಜನ, ಅದರ ಚಾಲಕ ಮತ್ತು ನಿರ್ವಾಹಕ ನಿಜಕ್ಕೂ ಅದೃಷ್ಟವಂತರು ಮಾರಾಯ್ರೇ. ಅಪಘಾತದ ಪ್ರಮಾಣ ಇನ್ನೂ ಸ್ವಲ್ಪ ಹೆಚ್ಚಿದ್ದರೆ ಅದು ಫ್ಲೈಓವರ್ (flyover) ಮೇಲಿಂದ ಕೆಳಗೆ ಬೀಳುತಿತ್ತು. ದುರ್ಘಟನೆಯಲ್ಲಿ ಕೇವಲ 5 ಜನ ಮಾತ್ರ ಗಾಯಗೊಂಡಿದ್ದಾರೆ ಮತ್ತು ಅವರಿಗೆ ನೆಲಮಂಗಲದ ಖಾಸಗಿ ಆಸ್ಪತ್ರೆಯೊಂದರಲ್ಲಿ (private hospital in Nelamangala) ಚಿಕಿತ್ಸೆ ಒದಗಿಸಿಸಲಾಗಿದೆ. ಬೆಂಗಳೂರು ಕಡೆ ಬರುತ್ತಿದ್ದ ಬಸ್ಸು ಬೆಂಗಳೂರು ತಾಲ್ಲೂಕಿನ ಅಡಕಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣನ ತಪ್ಪಿ ಡಿವೈಡರ್ ಗೆ ಗುದ್ದಿದ್ದರಿಂದ ಅಪಘಾತ ಸಂಭವಿಸಿದೆ. ಬಸ್ಸಿನ ಹಿಂಭಾಗ ಎಕ್ಸೆಲ್ ಮುರಿದು ಕೆಳಗೆ ಬಿದ್ದಿರುವುದನ್ನು ನೋಡಬಹುದು. ವಾಹನದ ಮುಂದಿನ ಟೈರ್ ಗಳು ಸಹ ಕಿತ್ತು ಬಂದಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಹೆಚ್ಚಿನ ಪ್ರಮಾಣದಲ್ಲಿ ಜಖಂಗೊಂಡಿರುವ ಬಸ್ಸನ್ನು ಕ್ರೇನ್ ಸಹಾಯದಿಂದ ಡಿವೈಡರ್ ಮೇಲಿಂದ ಎತ್ತಿರುವುದು ನಿಜ ಅದರೆ ಅದನ್ನು ಹತ್ತಿರದ ಡಿಪೋಗೆ ಟೋ ಮಾಡಿಕೊಂಡು ಹೋಗುವುದು ಸಹ ಸಾಧ್ಯವಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಕಾರು ಅಪಘಾತದಲ್ಲಿ ಮೃತಪಟ್ಟಿಲ್ಲ ಕಿರುತೆರೆ ನಟಿ ಪವಿತ್ರಾ; ಶಾಕಿಂಗ್ ವಿಚಾರ ಬಿಚ್ಚಿಟ್ಟ ಪತಿ

Published on: May 18, 2024 02:08 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More