ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನೆ ಬಳಿಯೇ KSRTC ಬಸ್ ಪಲ್ಟಿ, ತಪ್ಪಿದ ಭಾರೀ ಅನಾಹುತ
ಬೆಳಗಾವಿಯಲ್ಲಿ ನಗರ ಬಸ್ ನಿಲ್ದಾಣದಿಂದ ಸಹ್ಯಾದ್ರಿ ನಗರಕ್ಕೆ ಹೊರಟ ಸಂದರ್ಭದಲ್ಲಿ ಕುವೆಂಪು ನಗರದಲ್ಲಿ ಸರ್ಕಾರಿ ಬಸ್ ಗುಂಡಿಗೆ ಬಿದ್ದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಿವಾಸದ ಸಮೀಪದಲ್ಲೇ ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಹದಿನೈದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗಾವಿ, ಸೆಪ್ಟೆಂಬರ್ 16 : ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನೆಯ ಕೂಗಳತೆಯ ದೂರದಲ್ಲೇ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿದೆ. ಬೆಳಗಾವಿ ನಗರ ಬಸ್ ನಿಲ್ದಾಣದಿಂದ ಸಹ್ಯಾದ್ರಿ ನಗರಕ್ಕೆ
ಹೊರಟ ಸಂದರ್ಭದಲ್ಲಿ ಕುವೆಂಪು ನಗರದಲ್ಲಿ ಸರ್ಕಾರಿ ಬಸ್ ಗುಂಡಿಗೆ ಬಿದ್ದಿದೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್ ಹದಿನೈದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Published on: Sep 16, 2025 04:07 PM
