Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ ಬಳಿ ಚಾಲಕನ ಅಜಾಗರೂಕತೆಯಿಂದ ಲಾರಿಗೆ ಗುದ್ದಿದ ಕೆಎಸ್​ಆರ್​ಟಿಸಿ ಬಸ್; 13 ಜನರಿಗೆ ಗಾಯ, ಆಸ್ಪತ್ರೆಗೆ ದಾಖಲು

ನೆಲಮಂಗಲ ಬಳಿ ಚಾಲಕನ ಅಜಾಗರೂಕತೆಯಿಂದ ಲಾರಿಗೆ ಗುದ್ದಿದ ಕೆಎಸ್​ಆರ್​ಟಿಸಿ ಬಸ್; 13 ಜನರಿಗೆ ಗಾಯ, ಆಸ್ಪತ್ರೆಗೆ ದಾಖಲು

ಅರುಣ್​ ಕುಮಾರ್​ ಬೆಳ್ಳಿ
|

Updated on: Oct 07, 2023 | 6:53 PM

ಮೊಬೈಲ್ ಕೆಮೆರಾದಲ್ಲಿ ಮಾಡಿರುವ ವಿಡಿಯೋದಲ್ಲಿ ಬಸ್ಸಿನ ಎಡಭಾಗಕ್ಕೆ ಆಗಿರುವ ಜಖಂ ನೋಡಿದರೆ, ಬಸ್ ಎಷ್ಟು ಬಲವಾಗಿ ಲಾರಿಗೆ ಗುದ್ದಿದೆ ಅನ್ನೋದು ಗೊತ್ತಾಗುತ್ತದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ನೆಲಮಂಗಲ: ಇದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕನ (KSRTC bus driver) ದಿವ್ಯ ನಿರ್ಲಕ್ಷ್ಯ (negligence) ಮತ್ತು ಅಜಾಗರೂಕತೆ ಅಲ್ಲದೆ ಮತ್ತೇನೂ ಅಲ್ಲ. ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗಿರುವ ಈ ದೃಶ್ಯ ನೋಡಿ. ನೆಲಮಂಗಲ ತಾಲ್ಲೂಕಿನ ಗುಂಡೇನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4 (NH4) ರಲ್ಲಿ ನಡೆದ ಅಪಘಾತದ ದೃಶ್ಯವಿದು. ಕಾಂಕ್ರೀಟ್ ಮಿಕ್ಸರ್ ಲಾರಿ ರಸ್ತೆಯನ್ನು ಕ್ರಾಸ್ ಮಾಡುತ್ತಿದ್ದರೂ ಬಸ್ ಚಾಲಕ ವೇಗವನ್ನು ತಗ್ಗಿಸದೆ ಧಡಾರನೆ ಲಾರಿಗೆ ಗುದ್ದುತ್ತಾನೆ. ಬಸ್ ನಲ್ಲಿದ್ದ 13 ಜನರಿಗೆ ಗಾಯಗಳಾಗಿದ್ದು ಅವರನ್ನು ದಾಬಸ್ ಪೇಟೆಯ ಸರ್ಕಾರೀ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮೊಬೈಲ್ ಕೆಮೆರಾದಲ್ಲಿ ಮಾಡಿರುವ ವಿಡಿಯೋದಲ್ಲಿ ಬಸ್ಸಿನ ಎಡಭಾಗಕ್ಕೆ ಆಗಿರುವ ಜಖಂ ನೋಡಿದರೆ, ಬಸ್ ಎಷ್ಟು ಬಲವಾಗಿ ಲಾರಿಗೆ ಗುದ್ದಿದೆ ಅನ್ನೋದು ಗೊತ್ತಾಗುತ್ತದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ