ಚಾರ್ಮಾಡಿ ಘಾಟ್ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ ಸ್ಟೇರಿಂಗ್ ಕಟ್: ಆಮೇಲೇನಾಯ್ತು?

Edited By:

Updated on: Feb 27, 2025 | 10:39 AM

ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಆಗಮಿಸಿದ್ದ ಭಕ್ತರು ಮರಳಿ ಊರಿಗೆ ತೆರಳಲು ಶಿವಮೊಗ್ಗ ಬಸ್ ಏರಿದ್ದರು. ಆದರೆ, ಆ ಕೆಎಸ್​ಆರ್​​ಟಿಸಿ ಬಸ್ ಚಾರ್ಮಾಡಿ ಘಾಟ್ ತಿರುವಿನಲ್ಲಿ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿ ನಿಂತಿದೆ. ಅದೃಷ್ಟವಶಾತ್, ಚಾಲಕನ ಸಮಯಪ್ರಜ್ಞೆಯಿಂದ ಸಂಭಾವ್ಯ ಅಪಘಾತ ತಪ್ಪಿದೆ. ಬದಲಿ ಬಸ್​ಗಾಗಿ ಪ್ರಯಾಣಿಕರು ರಸ್ತೆಯಲ್ಲಿಯೇ ಕಾದು ಕುಳಿತಿದ್ದಾರೆ.

ಮಂಗಳೂರು, ಫೆಬ್ರವರಿ 27: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾಗಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್​ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ. ಆದರೆ, ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರ ಜೀವ ಉಳಿದಿದೆ.

ಅಪಾಯದ ಅರಿವಾಗುತ್ತಿದ್ದಂತೆಯೇ ಬಸ್ಸನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಚಾಲಕ ಹೇಗೋ ನಿಲ್ಲಿಸುವಲ್ಲಿ ಸಫಲರಾಗಿದ್ದಾರೆ. ಇದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಬಸ್​ನಲ್ಲಿದ್ದ ಪ್ರಯಾಣಿಕರನ್ನು ಬದಲಿ ಬಸ್​ನಲ್ಲಿ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More