AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಲಕ್ಷ ಬೆಲೆ ಬಾಳುವ ಒಡವೆಗಳಿದ್ದ ಬ್ಯಾಗ್ ಹಿಂದಿರುಗಿಸಿ ಮಾನವೀಯತೆ ಮೆರೆದ KSRTC ಬಸ್ ಚಾಲಕ, ನಿರ್ವಾಹಕ

ಮೂರು ಲಕ್ಷ ಬೆಲೆ ಬಾಳುವ ಒಡವೆಗಳಿದ್ದ ಬ್ಯಾಗ್ ಹಿಂದಿರುಗಿಸಿ ಮಾನವೀಯತೆ ಮೆರೆದ KSRTC ಬಸ್ ಚಾಲಕ, ನಿರ್ವಾಹಕ

ಮಹೇಶ್ ಇ, ಭೂಮನಹಳ್ಳಿ
| Updated By: ಆಯೇಷಾ ಬಾನು|

Updated on: Jun 03, 2024 | 12:13 PM

Share

ಮಹಿಳೆಯೊಬ್ಬರು ಕರ್ನೂಲ್ ಜಿಲ್ಲೆಯ ಅದೋನಿಯಿಂದ ಬಳ್ಳಾರಿಗೆ ಪ್ರಯಾಣ ಮಾಡ್ತಿದ್ದ ವೇಳೆ ಕೆಎಸ್​ಆರ್​ಟಿಸಿ ಬಸ್​ನಲ್ಲೇ ಮೂರು ಲಕ್ಷ ಬೆಲೆ ಬಾಳುವ ಒಡವೆಗಳ ಬ್ಯಾಗನ್ನು ಮರೆತು ಹೋಗಿದ್ದರು. ಸದ್ಯ ಚಾಲಕ ಹಾಘೂ ನಿರ್ವಾಹಕ ಬ್ಯಾಗನ್ನು ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ.

ತುಮಕೂರು, ಜೂನ್.03: ಚಿನ್ನಾಭರಣವಿದ್ದ ಬ್ಯಾಗ್​ ಅನ್ನು ಹಿಂದಿರುಗಿಸಿ ಕೆಎಸ್​ಆರ್​ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕ ಮಾನವೀಯತೆ ಮೆರೆದಿದ್ದಾರೆ. ಕರ್ನೂಲ್ ಜಿಲ್ಲೆಯ ಅದೋನಿಯಿಂದ ಬಳ್ಳಾರಿಗೆ ಪ್ರಯಾಣ ಮಾಡ್ತಿದ್ದ ಮಹಿಳೆಯೊಬ್ಬರು ಕೆಎಸ್​ಆರ್​ಟಿಸಿ ಬಸ್​ನಲ್ಲಿ ಮೂರು ಲಕ್ಷ ಬೆಲೆಬಾಳುವ ಒಡವೆಗಳಿದ್ದ ಬ್ಯಾಗನ್ನು ಮರೆತು ಹೋಗಿದ್ದರು. ಇದನ್ನು ಗಮನಿಸಿದ ಚಾಲಕ ಸಂತೋಷ್ ಕಣವಿ ಹಾಗೂ ನಿರ್ವಾಹಕ ಕಲ್ಲಪ್ಪ ಹನುಮಂತ್ ಕವಣಿ ಅವರು ಒಡವೆ ವಾಪಸ್ ನೀಡಿ ಮಾನವೀಯತೆ ಮೆರೆದಿದ್ದಾರೆ. ಹೊಸಪೇಟೆ ಬಳ್ಳಾರಿ ಹಾಗೂ ಶಿರಾ ಡಿಪೋಗಳ ಸಹಕಾರದೊಂದಿಗೆ ಮಹಿಳೆ ಪತ್ತೆ ಮಾಡಿ ಶಿರಾ ಘಟಕದಲ್ಲಿದ್ದ ಒಡವೆ ವಾಪಸ್ ನೀಡಲಾಗಿದೆ. ಚಾಲಕ ಹಾಗೂ ನಿರ್ವಾಹಕರ ಮಾನವೀಯತೆಗೆ ಸಾರ್ವಜನಿಕರ ಮೆಚ್ಚುಗೆ ಸೂಚಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ