Karnataka Transport Strike; ಕೋರ್ಟ್ ಆದೇಶ ನಮ್ಮ ಕೈಸೇರುವ ಹೊತ್ತಿಗೆ ಮುಷ್ಕರ ಶುರುವಾಗಿತ್ತು: ಅನಂತ್ ಸುಬ್ಬಾರಾವ್

ಅರುಣ್​ ಕುಮಾರ್​ ಬೆಳ್ಳಿ

Updated on: Aug 05, 2025 | 5:46 PM

ಮಾತುಕತೆಗೆ ಅಂತ ಕೂತಾಗ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ, ಹಿಂದೆ ನಡೆದ ಮೀಟಿಂಗ್​ಗಳಲ್ಲಿ ಸರ್ಕಾರ ನಮಗೆ ಮೂರು ನಾಮ ಹಾಕಿತ್ತು, ಈಗ ಒಂದು ನಾಮ ಹೋಗಿದೆ, ಉಳಿದರೆಡು ನಾಮಗಳನ್ನೂ ಕೋರ್ಟ್ ತೆಗೆಸಿಬಿಡಬಹುದು, ಮುಖ್ಯಮಂತ್ರಿಯವರೊಂದಿಗೆ ಕೋರ್ಟ್ ಚರ್ಚೆ ನಡೆಸಿದೆ, ಅದು ನೀಡುವ ಆದೇಶಕ್ಕೆ ತಲೆ ಬಾಗುತ್ತೇವೆ ಎಂದು ಅನಂತ್ ಸುಬ್ಬಾರಾವ್ ಹೇಳಿದರು.

ಬೆಂಗಳೂರು, ಆಗಸ್ಟ್ 5: ಸಾರಿಗೆ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಇಂದು ಮೀಟಿಂಗ್ ನಡೆಸಿದ ಬಳಿಕ ಪ್ರೆಸ್ ಮೀಟ್ ನಡೆಸಿ ಮಾತಾಡಿದ ಕೆಎಸ್​ಆರ್​ಟಿಸಿ ನೌಕರರ ಜಂಟಿ ಕ್ರಿಯಾ ಸಮಿತಿ (Joint Action Committee) ಅಧ್ಯಕ್ಷ ಹೆಚ್ ವಿ ಅನಂತ್ ಸುಬ್ಬಾರಾವ್, ಸಾರಿಗೆ ನೌಕರರು ಕೋರ್ಟ್ ಆದೇಶವನ್ನು ಉಲ್ಲಂಘಿಸಿಲ್ಲ, ಅದೇಶದ ಪ್ರತಿ ನಮ್ಮ ಕೈಸೇರುವಷ್ಟು ಹೊತ್ತಿಗೆ ಮುಷ್ಕರ ಆರಂಭವಾಗಿತ್ತು ಮತ್ತು ಅದು ಸಿಕ್ಕ ಬಳಿಕ ಯಾವ ವಾಹನವನ್ನೂ ತಡೆದಿಲ್ಲ ಎಂದು ಹೇಳಿದರು. ಸಿಎಂ ಜೊತೆ ನಡೆದ ಮಾತುಕತೆಯಲ್ಲಿ ನಾವು ಸಲ್ಲಿಸಿದ ಬೇಡಿಕೆ ಏನು ಮತ್ತು ಸರ್ಕಾರ ನೀಡಲು ಒಪ್ಪಿದ್ದು ಏನು ಅನ್ನೋದನ್ನು ಕೋರ್ಟ್​ಗೆ ತಿಳಿಸುವಂತೆ ನಮ್ಮ ವಕೀಲರಿಗೆ ಹೇಳಿದ್ದೇವೆ ಎಂದು ಸುಬ್ಬಾರಾವ್ ಹೇಳಿದರು. ನಾವು 38 ತಿಂಗಳ ಹಿಂಬಾಕಿ ಕೊಡಬೇಕೆಂದು ಬೇಡಿಕೆಯಿಟ್ಟರೆ ಸರ್ಕಾರ 14 ತಿಂಗಳ ಬಾಕಿ ಕೊಡಲು ತಯಾರಿದೆ, ಸರ್ಕಾರ ಮತ್ತು ನಮ್ಮ ನಡುವೆ ಹೆಚ್ಚೆಂದರೆ ₹1,000 ಕೋಟಿಗಳ ವ್ಯತ್ಯಾಸವಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ:  ಮಹಿಳೆಯರು 500 ಕೋಟಿ ಸಲ ಬಸ್​ಗಳಲ್ಲಿ ಸಂಚರಿಸಿದರೆಂದು ಸಂಭ್ರಮಿಸುವ ಸಿಎಂ ಸಾರಿಗೆ ನೌಕರಿಗಾಗಿ ಮರುಗಲಿಲ್ಲ: ಅನಂತ ಸುಬ್ಬಾರಾವ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published on: Aug 05, 2025 05:35 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.