ಬೆಂಗಳೂರು ಏರ್ಪೋರ್ಟ್ – ದಾವಣಗರೆ ಮಧ್ಯೆ ಕೆಎಸ್​ಆರ್​ಟಿಸಿ ಫ್ಲೈಬಸ್​ ಸೇವೆಗೆ ಚಾಲನೆ

Edited By:

Updated on: Nov 13, 2025 | 10:27 AM

Bengaluru Airport to Davanagere Flybus: ದಾವಣಗೆರೆ ಹಾಗೂ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮಧ್ಯೆ ಸಂಚರಿಸುವ ಕೆಎಸ್​ಆರ್​ಟಿಸಿ ನೂತನ ಫ್ಲೈಬಸ್ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದ್ದಾರೆ. ಈ ಹೊಸ ಸೇವೆಯಿಂದ ವಿಮಾನ ನಿಲ್ದಾಣ ಪ್ರಯಾಣಿಕರಿಗೆ ದೊಡ್ಡ ಮಟ್ಟದ ಅನುಕೂಲವಾಗಲಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಬೆಂಗಳೂರು, ನವೆಂಬರ್ 12: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆಗೆ ನೇರ ಸಂಚಾರಕ್ಕಾಗಿ ಕೆಎಸ್​ಆರ್​ಟಿಸಿ ನೂತನ ಫ್ಲೈಬಸ್ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬುಧವಾರ ಚಾಲನೆ ನೀಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಐಎಬಿ (KIA) ನಿಂದ ದಾವಣಗೆರೆಗೆ ಪ್ರತಿದಿನ ಎರಡು ಫ್ಲೈಬಸ್‌ಗಳು ಸಂಚರಿಸಲಿವೆ. ಈ ಬಸ್‌ಗಳು ತುಮಕೂರು ಮತ್ತು ಚಿತ್ರದುರ್ಗ ಬೈಪಾಸ್ ಮಾರ್ಗವಾಗಿ ಪ್ರಯಾಣಿಸಲಿವೆ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಏರ್‌ಪೋರ್ಟ್‌ಗೆ ಬರುವ ಮತ್ತು ಏರ್ಪೋರ್ಟ್​​ನಿಂದ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಈ ನೂತನ ಫ್ಲೈಬಸ್ ಸೇವೆ ಆರಂಭಿಸಲಾಗಿದೆ. ಈ ಬಸ್‌ಗಳಲ್ಲಿ ಶೌಚಾಲಯ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನೂ ಒದಗಿಸಲಾಗಿದೆ. ಇಲ್ಲಿಯವರೆಗೆ ಮೈಸೂರು, ಮಡಿಕೇರಿ, ಕುಂದಾಪುರ ಸೇರಿದಂತೆ ಕೆಲವು ನಗರಗಳಿಗೆ ಮಾತ್ರ ಫ್ಲೈಬಸ್ ಸೇವೆ ಲಭ್ಯವಿತ್ತು. ಈಗಿನಿಂದ ಹೆಚ್ಚುವರಿಯಾಗಿ ದಾವಣಗೆರೆಯತ್ತವೂ ನೇರ ಸಂಪರ್ಕ ಸಿಗಲಿದೆ.

ಬೆಂಗಳೂರಿನಿಂದ ದಾವಣಗೆರೆ ಬಸ್ ವೇಳಾಪಟ್ಟಿ

ಬೆಂಗಳೂರು ವಿಮಾನ ನಿಲ್ದಾಣದಿಂದ ತಡರಾತ್ರಿ 00:45 ಗಂಟೆಗೆ ಹೊರಟು ಬೆಳಗ್ಗೆ 5:45 ಗಂಟೆಗೆ ದಾವಣಗೆರೆಗೆ ತಲುಪಲಿದೆ. ಬೆಳಗ್ಗೆ 10 ಗಂಟೆಗೆ ಹೊರಟು ಮಧ್ಯಾಹ್ನ 3 ಗಂಟೆಗೆ ದಾವಣಗೆರೆಗೆ ತಲುಪಲಿದೆ.

ದಾವಣಗೆರೆಯಿಂದ ವಿಮಾನ ನಿಲ್ದಾಣಕ್ಕೆ ಬಸ್ ವೇಳಾಪಟ್ಟಿ

ದಾವಣಗೆರೆಯಿಂದ ಬೆಳಗ್ಗೆ 8 ಗಂಟೆಗೆ ಹೊರಟ ಬಸ್ ಮಧ್ಯಾಹ್ನ 1ಕ್ಕೆ ವಿಮಾನ ನಿಲ್ದಾಣ ತಲುಪಲಿದೆ. ದಾವಣಗೆರೆಯಿಂದ ಸಂಜೆ 5ಕ್ಕೆ ಹೊರಡುವ ಬಸ್ ರಾತ್ರಿ 10 ಗಂಟೆಗೆ ವಿಮಾನ ನಿಲ್ದಾಣ ತಲುಪಲಿದೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿಯ ಈ ಬಸ್​ನಲ್ಲಿ ಇಂದಿನಿಂದ ಸಿಗುತ್ತೆ ನಂದಿನಿ ಸ್ನ್ಯಾಕ್ ಕಿಟ್!

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 12, 2025 11:43 AM
Follow Us
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More