ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ; ಆಸ್ಪತ್ರೆಗೆ ತಲುಪುವಷ್ಟರಲ್ಲಿ ವ್ಯಕ್ತಿ ಸಾವು
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದಾಸರಹಳ್ಳಿ ಬಳಿ ಬೆಂಗಳೂರಿನಿಂದ ಪಾವಗಡಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಕ ಪ್ರಭಾಕರ್ (45) ಅವರಿಗೆ ಹೃದಯಾಘಾತ ಸಂಭವಿಸಿದೆ. ತೀವ್ರ ಎದೆನೋವಿನಿಂದ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೃತರಾಗಿದ್ದಾರೆ. ಈ ಘಟನೆ ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದು, ಪ್ರಕರಣ ದಾಖಲಾಗಿದೆ.
ತುಮಕೂರು, ಏ.15 : ಬೆಂಗಳೂರಿನಿಂದ ಪಾವಗಡಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್ಆರ್ಟಿಸಿ (KSRTC) ಬಸ್ನಲ್ಲೇ ಪ್ರಯಾಣಿಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲೂಕಿನ ದಾಸರಹಳ್ಳಿ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಪ್ರಭಾಕರ್ (45) ಎಂದು ಗುರುತಿಸಲಾಗಿದೆ. ಇವರು ರಾತ್ರಿ ಬೆಂಗಳೂರಿನಿಂದ ಹೊಸಕೆರೆಗೆ ತೆರಳಲು ಟಿಕೆಟ್ ಪಡೆದು ಬಸ್ ಹತ್ತಿದ್ದರು. ಬಸ್ ಮಧುಗಿರಿ ತಾಲೂಕಿನ ದಾಸರಹಳ್ಳಿ ಬಳಿ ಸಾಗುತ್ತಿದ್ದಾಗ ಪ್ರಭಾಕರ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ದುರದೃಷ್ಟವಶಾತ್, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮಾರ್ಗಮಧ್ಯೆಯೇ ಪ್ರಭಾಕರ್ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
