Raichur: KSRTC ಸ್ಲೀಪರ್​ ಬಸ್​ ಪಲ್ಟಿ; ತಪ್ಪಿದ ಭಾರೀ ದುರಂತ

Edited By:

Updated on: Sep 26, 2025 | 12:50 PM

ಚಾಲಕನ ನಿಯಂತ್ರಣ ತಪ್ಪಿ KSRTC ಸ್ಲೀಪರ್​ ಬಸ್​ ಪಲ್ಟಿಯಾಗಿರುವ ಘಟನೆ ರಾಯಚೂರು ನಗರದ ಹೊರವಲಯ ಸಾಥಮೈಲ್ ಕ್ರಾಸ್ ಬಳಿ ನಡೆದಿದೆ. ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಾವಣಗೆರೆ ಕಡೆಯಿಂದ ರಾಯಚೂರಿನತ್ತ ಬರುತ್ತಿದ್ದ ವೇಳೆ ಬಸ್​ ಚಾಲಕನ ನಿಯಂತ್ರಣ ಕಳೆದುಕೊಂಡಿದೆ.

ರಾಯಚೂರು, ಸೆಪ್ಟೆಂಬರ್​ 26: ನಗರದ ಹೊರವಲಯ ಸಾಥಮೈಲ್ ಕ್ರಾಸ್ ಬಳಿ KSRTC ಸ್ಲೀಪರ್​ ಬಸ್​ ಪಲ್ಟಿಯಾಗಿದೆ. ಬಸ್​ನಲ್ಲಿದ್ದ 15 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಪ್ರಯಾಣಿಕ ವಿಶ್ವನಾಥ್​ ಎಂಬುವವರ ಕಾಲು ಮುರಿದಿದ್ದು, ರಿಮ್ಸ್ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ದಾವಣಗೆರೆ ಕಡೆಯಿಂದ ರಾಯಚೂರಿನತ್ತ ಬರುತ್ತಿದ್ದ ಸ್ಲೀಪರ್​ ಬಸ್​ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು, ಮಳೆ ನಡುವೆಯೂ ರಕ್ಷಣಾ ಕಾರ್ಯ ನಡೆಸಲಾಗಿದೆ.

ಮತ್ತಷ್ಟು ವಿಡಿಯೋಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Published on: Sep 26, 2025 12:44 PM
Follow Us
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More