ಎಕ್ಸ್​ಪ್ರೆಸ್ ಬಸ್​ಗಳಿಗೆ ರಾಜಹಂಸ ಬಸ್ ಮಾದರಿ ವಿನ್ಯಾಸ ಮತ್ತು ಸೇವೆ ಒದಗಿಸಲು ನಿರ್ಧರಿಸಿರುವ ಕೆಎಸ್​ಆರ್​ಟಿಸಿ

ಅರುಣ್​ ಕುಮಾರ್​ ಬೆಳ್ಳಿ

Updated on: Aug 21, 2023 | 5:48 PM

ಬೆಂಗಳೂರು ಮತ್ತು ಧರ್ಮಸ್ಥಳ ನಡುವೆ ಓಡಾಡುವ ಈ ಬಸ್ ಒಳಭಾಗದಲ್ಲಿ ಸ್ವಲ್ಪ ರಾಜಹಂಸ ಬಸ್ ನಂತೆ ವಿನ್ಯಾಸಗೊಂಡಿದೆ. ಆಸನಗಳು ಸುಖಾಸೀನಗೊಂಡಿರುವುದನ್ನು ಸಂಸ್ಥೆಯ ಅಧಿಕಾರಿಗಳೊಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವೀಕ್ಷಿಸುತ್ತಿದ್ದಾರೆ.

ಬೆಂಗಳೂರು: ಶಕ್ತಿ ಯೋಜನೆ (Shakti Scheme) ಜಾರಿಗೊಳಿಸಿದ ಬಳಿಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ದಿವಾಳಿಯೇಳುತ್ತದೆ ಅಂತ ವಿರೋಧ ಪಕ್ಷಗಳ ನಾಯಕರು ಕುಹುಕವಾಡಿದ್ದರು. ಈ ತಿಂಗಳು ಸಂಸ್ಥೆಯ ನೌಕರರಿಗೆ ಸಂಬಳ ಬಿಡುಗಡೆಯಾಗೋದು ತಡವಾದಾಗ ಅವರು ಹೇಳಿದ್ದರಲ್ಲಿ ಉತ್ಪ್ರೇಕ್ಷೆಯೇನೂ ಇಲ್ಲ ಅನಿಸಿದ್ದು ನಿಜವೇ. ಆದರೆ, ಈ ಬಸ್ಸನ್ನು ನೋಡುತ್ತಿದ್ದರೆ ವಾಸ್ತವ ಬೇರೆಯಿದೆ ಅನಿಸದಿರದು. ರಾಜಹಂಸ (Rajahamsa) ಮಾದರಿ ವ್ಯವಸ್ಥೆ ಮತ್ತು ಸವಲತ್ತುಗಳನ್ನು ಎಕ್ಸ್ ಪ್ರೆಸ್ ಬಸ್ ಗಳಲ್ಲಿ ಕಲ್ಪಿಸಿ ರಸ್ತೆಗಿಳಿಸುವ ನಿರ್ಣಯವನ್ನು ಸಾರಿಗೆ ಇಲಾಖೆ ತೆಗೆದುಕೊಂಡಿದೆ ಮತ್ತು ಅದರ ನಮೂನೆ ಇಲ್ಲಿದೆ. ಬೆಂಗಳೂರು ಮತ್ತು ಧರ್ಮಸ್ಥಳ ನಡುವೆ ಓಡಾಡುವ ಈ ಬಸ್ ಒಳಭಾಗದಲ್ಲಿ ಸ್ವಲ್ಪ ರಾಜಹಂಸ ಬಸ್ ನಂತೆ ವಿನ್ಯಾಸಗೊಂಡಿದೆ. ಆಸನಗಳು ಸುಖಾಸೀನಗೊಂಡಿರುವುದನ್ನು ಸಂಸ್ಥೆಯ ಅಧಿಕಾರಿಗಳೊಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ವೀಕ್ಷಿಸುತ್ತಿದ್ದಾರೆ. ಈ ಬಸ್ ಬೆಂಗಳೂರು ಬಿಟ್ಟರೆ ನಿಲ್ಲೋದು ಧರ್ಮಸ್ಥಳದಳದಲ್ಲೇ. ಮುಂದಿನ ಒಂದೂವರೆ ತಿಂಗಳ ಅವಧಿಯಲ್ಲಿ ಇಂಥ 300 ಬಸ್ ಗಳು ರಸ್ತೆಗಿಳಿಯಲಿವೆಯಂತೆ. ಇದನ್ನೆಲ್ಲ ನೋಡುತ್ತಿದ್ದರೆ ಕರಾರಸಾ ಸಂಸ್ಥೆ ನಷ್ಟದಲ್ಲಿದೆ ಅಂತ ಅನಿಸದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.