ಕೂಡಲಸಂಗಮ ಪಂಚಮಸಾಲಿ ಪೀಠಾಧಿಪತಿ ಬದಲಾವಣೆ ಸುಳಿವು ನೀಡಿದ: ಕಾಶಪ್ಪನವರ್

Edited By: ವಿವೇಕ ಬಿರಾದಾರ

Updated on: Apr 06, 2025 | 9:43 PM

ಕರ್ನಾಟಕ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಅವರು ಕೂಡಲಸಂಗಮ ಪಂಚಮಸಾಲಿ ಪೀಠಾಧಿಪತಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರ ಬದಲಾವಣೆಯ ಸುಳಿವು ನೀಡಿದ್ದಾರೆ. ಸ್ವಾಮೀಜಿಗಳ ಅವಧಿ ಮುಗಿಯುತ್ತಿರುವ ಬಗ್ಗೆ ಅವರು ಹೇಳಿದ್ದಾರೆ ಮತ್ತು ಬದಲಾವಣೆ ಅನಿವಾರ್ಯ ಎಂದು ಸೂಚಿಸಿದ್ದಾರೆ. ಇದು ಲಿಂಗಾಯತ ಸಮುದಾಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಕೂಡಲಸಂಗಮ ಪಂಚಮಸಾಲಿ ಪೀಠಾಧಿಪತಿ ಬಸವ ಜಯಮೃತ್ಯುಂಜಯ ಸ್ವಾಮೀಜಿ  ಬದಲಾವಣೆಯಾಗುವ ಸುಳಿವನ್ನು ಕರ್ನಾಟಕ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ನೀಡಿದ್ದಾರೆ. ಗುರುಗಳು ಸ್ವಯಂಘೋಷಿತವಾಗಿ ಇವರೇ ಬಂದಿಲ್ಲ. ಕಾಲ ಕಾಲಕ್ಕೆ ಏನೇನು ಆಗಬೇಕೋ ಅದೆಲ್ಲಾ ಆಗುತ್ತದೆ. ಬದಲಾವಣೆ ಕಾಲ ಬಂದಾಗ ಯಾರೂ ತಡೆಯುವುದಿಲ್ಲ. ಭೂಮಂಡಲದಲ್ಲೇ ಯಾರನ್ನು ಉಳಿಸಲು ಆಗುವುದಿಲ್ಲ. ಸುನಾಮಿ ಯಾರನ್ನಾದ್ರೂ ಕೇಳಿ ಬರುತ್ತಾ?. ಇವರ ಕಾಲ ಮುಗಿದಿದೆ‌, ಬದಲಾವಣೆ ಆಗಿಯೇ ಆಗುತ್ತದೆ ಎಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಹೇಳಿದರು.

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More