ಕುಜ-ರಾಹು ಸಂಯೋಗ ರಾಶಿಫಲ: ಮಿಥುನ ರಾಶಿಯವರಿಗೆ ಉದ್ಯೋಗದಲ್ಲಿ ಕೆಲ ಮಾರ್ಪಾಟುಗಳು

ಅರುಣ್​ ಕುಮಾರ್​ ಬೆಳ್ಳಿ

Updated on: May 15, 2024 | 1:17 PM

ಕುಜ-ರಾಹು ಸಂಯೋಗ ರಾಶಿಫಲ: ಆತ್ಮಸ್ಥೈರ್ಯ ಕಳೆದುಕೊಂಡು ಕೆಲಸಕ್ಕೆ ರಾಜೀನಾಮೆ ಸಲ್ಲಿಸುವ ದುಸ್ಸಾಹಸ ಬೇಡ. ರೈತರಿಗೆ ಮತ್ತು ವಿದ್ಯಾರ್ಥಿಗಳಿಗೆ ಒಳ್ಳೆಯದಾಗಲಿದೆ. ಮಂಗಳವಾರದಂದು ಸುಬ್ರಹ್ಮಣ್ಯನ ದರ್ಶನ ಮಾಡಿಕೊಳ್ಳುವುದು ಮತ್ತು ಹಳದಿಪುಷ್ಟಗಳಿಂದ ಆರಾಧನೆ ಮಾಡುವುದು ಒಳ್ಳೆಯದು.

ಬೆಂಗಳೂರು: ಕುಜ-ರಾಹು ಸಂಯೋಗ ರಾಶಿಫಲ ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿ ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ಖ್ಯಾತ ಜ್ಯೋತಿಷಿ ಡಾಬಸವರಾಜ ಗುರೂಜಿ ಇಲ್ಲಿ ವಿಶ್ಲೇಷಿಸಿದ್ದಾರೆ. ಮೇ 15 ರಿಂದ ಜೂನ್ 1 ರವರೆಗೆ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಮೊದಲಾದ ಮಾಹಿತಿ ಇಲ್ಲಿದೆ.

ಮಿಥುನ ರಾಶಿ: ಈ ರಾಶಿಯವರಿಗೆ ಉದ್ಯೋಗದಲ್ಲಿ ಕೊಂಚ ಏರುಪೇರಾಗುವ ಸಾಧ್ಯತೆ ಇರುತ್ತದೆ ಮತ್ತು ಉದ್ಯೋಗದಲ್ಲಿ ಕೆಲ ಮಾರ್ಪಾಟುಗಳು ಅಗಬಹುದು. ಆದರೆ ಯಾವ ಕಾರಣಕ್ಕೂ ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ಮನೆ ಕಟ್ಟುವ ಕಾರ್ಯ ವಿಳಂಬಗೊಳ್ಳಲಿದೆ, ತಾಯಿಯ ಆರೋಗ್ಯದಲ್ಲಿ ಕೊಂಚ ಏರುಪೇರಾಗಲಿದೆ ಮಕ್ಕಳ ಜೊತೆ ಕಲಹಗಳೂ ನಡೆಯಬಹುದು. ಆತ್ಮಸ್ಥೈರ್ಯ ಕಳೆದುಕೊಂಡು ಕೆಲಸಕ್ಕೆ ರಾಜೀನಾಮೆ ಸಲ್ಲಿಸುವ ದುಸ್ಸಾಹಸ ಬೇಡ. ರೈತರಿಗೆ ಮತ್ತು ವಿದ್ಯಾರ್ಥಿಗಳಿಗೆ ಒಳ್ಳೆಯದಾಗಲಿದೆ. ಮಂಗಳವಾರದಂದು ಸುಬ್ರಹ್ಮಣ್ಯನ ದರ್ಶನ ಮಾಡಿಕೊಳ್ಳುವುದು ಮತ್ತು ಹಳದಿಪುಷ್ಟಗಳಿಂದ ಆರಾಧನೆ ಮಾಡುವುದು ಒಳ್ಳೆಯದು. ಉಪವಾಸ ವ್ರತ ಅಚರಿಸಿದರೆ ಎಲ್ಲ ಒಳ್ಳೆಯದಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   Health Care Tips in Kannada : ಮೊಣಕಾಲುಗಳ ನಡುವೆ ದಿಂಬು ಇಟ್ಟು ಮಲಗ್ತೀರಾ?ಆರೋಗ್ಯ ಲಾಭಗಳನ್ನು ತಿಳಿದುಕೊಳ್ಳಿ

Published on: May 15, 2024 12:12 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.