AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

V Shashi Kumar handovers baton: ಮಂಗಳೂರು ಪೊಲೀಸ್ ಆಯಕ್ತರಾಗಿ ಕುಲದೀಪ್ ಆರ್ ಜೈನ್ ಚಾರ್ಜ್ ವಹಿಸಿಕೊಂಡರು

V Shashi Kumar handovers baton: ಮಂಗಳೂರು ಪೊಲೀಸ್ ಆಯಕ್ತರಾಗಿ ಕುಲದೀಪ್ ಆರ್ ಜೈನ್ ಚಾರ್ಜ್ ವಹಿಸಿಕೊಂಡರು

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 24, 2023 | 1:19 PM

Share

ದಕ್ಷ ಮತ್ತು ಖಡಕ್ ಅಧಿಕಾರಿಯೆನಿಸಿಕೊಂಡಿದ್ದ ಶಶಿಕುಮಾರ್ ಸದಾ ಕೋಮು ದಳ್ಳುರಿಯಲ್ಲಿ ಉರಿಯುವ ಕರಾವಳಿ ನಗರದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಗೊಂಡಿರಲು ಸಾಕಷ್ಟು ಶ್ರಮಿಸಿದ್ದರು.

ಮಂಗಳೂರು: ಗುರುವಾರಂದು ರೇಲ್ವೇ ಡಿಐಜಿ ಆಗಿ ವರ್ಗಾವಣೆಗೊಂಡ ಮಂಗಳೂರು ಪೊಲೀಸ್ ಕಮೀಶನರ್ ಎನ್ ಶಶಿಕುಮಾರ್ (N Shashikumar) ಸ್ಥಾನಕ್ಕೆ 2011 ಬ್ಯಾಚ್ ನ ಐಪಿಎಸ್ ಅಧಿಕಾರಿ (IPS officer) ಮತ್ತು ನಿನ್ನೆಯವರೆಗೆ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿಯಾಗಿದ್ದ ಕುಲದೀಪ್ ಆರ್ ಜೈನ್ (Kuldeep R Jain) ಬಂದಿದ್ದಾರೆ. ದಕ್ಷ ಮತ್ತು ಖಡಕ್ ಅಧಿಕಾರಿಯೆನಿಸಿಕೊಂಡಿದ್ದ ಶಶಿಕುಮಾರ್ ಸದಾ ಕೋಮು ದಳ್ಳುರಿಯಲ್ಲಿ ಉರಿಯುವ ಕರಾವಳಿ ನಗರದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಗೊಂಡಿರಲು ಸಾಕಷ್ಟು ಶ್ರಮಿಸಿದ್ದರು. ಈ ಹಿನ್ನೆಲೆಯಲ್ಲಿ ಮೂಲತಃ ರಾಜಸ್ತಾನದವರಾದರೂ ತಮಿಳುನಾಡು ನಲ್ಲಿ ವಿಧ್ಯಾಭ್ಯಾಸ ಮಾಡಿರುವ ಕುಲದೀಪ್ ಮೇಲೆ ಗುರುತರವಾದ ಜವಾಬ್ದಾರಿ ಇದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.