AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಡಿಒ, ಕಾರ್ಯದರ್ಶಿಗಳ  ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ, ವಿಜಯೇಂದ್ರ

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ, ವಿಜಯೇಂದ್ರ

ಕಿರಣ್ ಹನುಮಂತ್​ ಮಾದಾರ್
|

Updated on: Oct 05, 2024 | 2:47 PM

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು(ಶನಿವಾರ) ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಗ್ರಾಮ ಪಂಚಾಯಿತಿಯ 11 ಒಕ್ಕೂಟದ ನೌಕರರು ಹೋರಾಟ ನಡೆಸುತ್ತಿದ್ದಾರೆ. ಈ ಹಿನ್ನಲೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್, ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಬೆಂಬಲ ಘೋಷಣೆ ಮಾಡುವಂತೆ ಮನವಿ ಮಾಡಿದರು.

ಬೆಂಗಳೂರು, ಅ.05: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು(ಶನಿವಾರ) ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಗ್ರಾಮ ಪಂಚಾಯಿತಿಯ 11 ಒಕ್ಕೂಟದ ನೌಕರರು ಹೋರಾಟ ನಡೆಸುತ್ತಿದ್ದಾರೆ. ಈ ಹಿನ್ನಲೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್, ಹೋರಾಟದಲ್ಲಿ ಭಾಗಿಯಾದರು. ಜೊತೆಗೆ ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆಗೆ ಬೆಂಬಲ ನೀಡುವಂತೆ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಬೆಂಬಲ ಘೋಷಣೆ ಮಾಡುವಂತೆ ಮನವಿ ಮಾಡಿದರು. ಕೂಡಲೇ ಹೆಚ್​ಡಿಕೆ ಹಾಗೂ ವಿಜಯೇಂದ್ರ ಅವರು ದೂರವಾಣಿ ಮೂಲಕ ಬೆಂಬಲ ಘೋಷಣೆ ಮಾಡಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ