ಅದ್ಯಾವ ಮುಖ ಇಟ್ಕೊಂಡು ಕುಮಾರಸ್ವಾಮಿ ಮುಸ್ಲಿಂ ವೋಟು ಕೇಳುತ್ತಾರೆ? ಜಮೀರ್ ಅಹ್ಮದ್

Updated on: Nov 01, 2024 | 2:39 PM

ನಿಖಿಲ್ ಕುಮಾರಸ್ವಾಮಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಮೀರ್, ಅವರ ಬಗ್ಗೆ ಕಾಮೆಂಟ್ ಮಾಡಲ್ಲ, ತನ್ನ ಮಗ ಮತ್ತು ನಿಖಿಲ್ ಇಬ್ಬರೂ ತನಗೆ ಒಂದೇ, ಅವರು ಈಗಲೂ ತನ್ನನ್ನು ಅಂಕಲ್ ಎಂದು ಕರೆಯುತ್ತಾರೆ ಎಂದರು. ಜೆಡಿಎಸ್ ಜೊತೆ ಬಾಂಧವ್ಯ ಕಡಿದುಕೊಂಡರೂ ಚಿಕ್ಕಂದಿನಿಂದ ನೋಡುತ್ತಾ ಬಂದಿರುವ ನಿಖಿಲ್ ಬಗ್ಗೆ ಜಮೀರ್ ಮಮತೆ ಇಟ್ಟಕೊಂಡಿರುವುದು ಅಭಿನಂದನೀಯ.

ಬಳ್ಳಾರಿ: ತಮ್ಮ ಅತಿರೇಕದ ಹೇಳಿಕೆಗಳಿಂದ ವಿವಾದಗಳನ್ನು ಸೃಷ್ಟಿಸುವ ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಬಳ್ಳಾರಿಯಲ್ಲಿ ಮಾತಾಡಿ ಚನ್ನಪಟ್ಟಣದಲ್ಲಿ ಕುಮಾರಸ್ವಾಮಿಗೆ ಮುಸ್ಲಿಂ ಮತದಾರರ ಬಳಿ ಹೋಗಿ ವೋಟು ಕೇಳುವ ನೈತಿಕತೆ ಇಲ್ಲ, ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ತನಗೆ ಮುಸ್ಲಿಂ ವೋಟುಗಳೇ ಬೇಡ, ಅವರು ತನ್ನ ಪಕ್ಕದಲ್ಲಿ ಬಂದು ನಿಲ್ಲೋದು ಸಹ ಬೇಕಿಲ್ಲ ಎನ್ನುತ್ತಾರೆ, ಅವರ ಮಾತನ್ನು ಸಿಟಿ ರವಿ, ಬಿವೈ ವಿಜಯೇಂದ್ರ ಪುನರುಚ್ಛರಿಸುತ್ತಾರೆ, ನಮಗೆ ಮುಸ್ಲಿಂ ವೋಟುಗಳು ಬೇಕೆಂದು ಕುಮಾರಸ್ವಾಮಿ ಬಿಜೆಪಿ ನಾಯಕರಿಂದ ಹೇಳಿಸಲಿ ನೋಡೋಣ ಎಂದು ಸವಾಲೆಸೆದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕಾಲುಕೆರೆದು ಜಗಳಕ್ಕೆ ಹೋಗುವ ಪ್ರವೃತ್ತಿ ಪ್ರದರ್ಶಿಸಿದ ಸಚಿವ ಜಮೀರ್ ಅಹ್ಮದ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More