AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸಲ್ಮಾನರ ವೋಟು ಕೇಳುವ ಹಕ್ಕನ್ನು ಕುಮಾರಸ್ವಾಮಿ ಕಳೆದುಕೊಂಡಿದ್ದಾರೆ: ಡಿಕೆ ಶಿವಕುಮಾರ್

ಮುಸಲ್ಮಾನರ ವೋಟು ಕೇಳುವ ಹಕ್ಕನ್ನು ಕುಮಾರಸ್ವಾಮಿ ಕಳೆದುಕೊಂಡಿದ್ದಾರೆ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Nov 25, 2024 | 2:10 PM

Share

ಯಾರೇ ಇರಲಿ ಯಾರೇ ಹೋಗಲಿ, ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆ ಇಲ್ಲ, ದೇಶದ ಇತಿಹಾಸವೇ ಕಾಂಗ್ರೆಸ್ ಇತಿಹಾಸ, ಚಕ್ರವರ್ತಿಗಳೆನಿಸಿಕೊಳ್ಳಲು ಹವಣಿಸುತ್ತಿದ್ದ ಸದ್ದಾಂ ಹುಸ್ಸೇನ್ ಅಂಥವರೇ ಅಳಿದು ಹೋಗಿದ್ದಾರೆ ಎಂದು ಹೇಳಿದ ಶಿವಕುಮಾರ್, ನಿಖಿಲ್ ಕುಮಾರಸ್ವಾಮಿ ಬಗ್ಗೆ ತನಗೆ ಸಹಾನುಭೂತಿ ಎಂದರು.

ಬೆಂಗಳೂರು: ಚನ್ನಪಟ್ಟಣದಲ್ಲಿ ಮುಸ್ಲಿಂ ವೋಟು ಕೈಬಿಟ್ಟಿದ್ದಕ್ಕೆ ಸೋಲುಣ್ಣಬೇಕಾಯಿತು ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಕುಮಾರಸ್ವಾಮಿ ಯಾವ ನೈತಿಕತೆಯೊಂದಿಗೆ ಅವರ ಮತ ಕೇಳುತ್ತಾರೆ? ಎನ್ ಡಿಎ ಮುಸಲ್ಮಾನರಿಗಾಗಿ ಏನಾದರೂ ಮಾಡಿದೆಯಾ, ಯಾವುದಾದರೂ ಕಾರ್ಯಕ್ರಮ ರೂಪಿಸಿದೆಯಾ? ಅವರಿಗಿದ್ದ 4 ಪರ್ಸೆಂಟ್ ಮೀಸಲಾತಿಯನ್ನು ಸಹ ಕಸಿದು ಬೇರೆಯವರಿಗೆ ನೀಡಲಾಗಿದೆ, ಮತ್ಯಾಕೆ ಅವರು ಜೆಡಿಎಸ್ ಗೆ ವೋಟು ಹಾಕುತ್ತಾರೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಕಾಂಗ್ರೆಸ್​ ಗೆಲುವಿಗೆ ಜೆಡಿಎಸ್-ಬಿಜೆಪಿ ಬೆಂಬಲಿಸಿವೆ: ಡಿಕೆ ಶಿವಕುಮಾರ್ ಶಾಕಿಂಗ್​ ಹೇಳಿಕೆ

Published on: Nov 25, 2024 01:53 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.