ಅಧಿಕಾರ ಕಳೆದುಕೊಳ್ಳುವಂತೆ ಮಾಡಿದ ಬಿಜೆಪಿ ಜೊತೆ ಕುಮಾರಸ್ವಾಮಿ ದೋಸ್ತಿ ಬೆಳೆಸುತ್ತಿದ್ದಾರೆ: ವೆಂಕಟರಮಣಪ್ಪ, ಮಾಜಿ ಶಾಸಕ

ಅರುಣ್​ ಕುಮಾರ್​ ಬೆಳ್ಳಿ

Updated on: Sep 12, 2023 | 1:30 PM

ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂದು ಕಾಂಗ್ರೆಸ್ ಹೈ ಕಮಾಂಡ್ ಮುಖ್ಯಮಂತ್ರಿ ಹುದ್ದೆಯನ್ನು ಕುಮಾರಸ್ವಾಮಿಯ ಮನೆಬಾಗಿಲಿಗೆ ಒಯ್ದುಕೊಟ್ಟು, 5 ವರ್ಷ ಅಧಿಕಾರ ನಡೆಸಿ ಅಂತ ಹೇಳಿತ್ತು. ಆದರೆ, ಅವರು ವೆಸ್ಟ್ ಎಂಡ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿ ಅಧಿಕಾರ ನಡೆಸಿದರು.ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂದು ಕಾಂಗ್ರೆಸ್ ಹೈ ಕಮಾಂಡ್ ಮುಖ್ಯಮಂತ್ರಿ ಹುದ್ದೆಯನ್ನು ಕುಮಾರಸ್ವಾಮಿಯ ಮನೆಬಾಗಿಲಿಗೆ ಒಯ್ದುಕೊಟ್ಟು, 5 ವರ್ಷ ಅಧಿಕಾರ ನಡೆಸಿ ಅಂತ ಹೇಳಿತ್ತು.

ತುಮಕೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಶಾಸಕ ವೆಂಕಟರಮಣಪ್ಪ (Venkataramanappa) ನೇರ ಮಾತುಗಾರಿಕೆಗೆ ಹೆಸರಾದವರು. ಪಾವಗಡದಲ್ಲಿಂದು ಸಾರ್ವಜನಿಕ ಸಭೆಯೊಂದರಲ್ಲಿ ಮಾತಾಡಿದ ಅವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಗುತ್ತಿರುವ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಯವರ (HD Kumaraswamy) ಇರಾದೆಯನ್ನು ಕಟುವಾಗಿ ಟೀಕಿಸಿದರು. ಈ ಬಾರಿಯ ಚುನಾವಣೆಯಲ್ಲಿ (Assembly polls) 120ಕ್ಕಿಂತ ಹೆಚ್ಚು ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತೇವೆ ಅಂತ ಹೇಳುತ್ತಿದ್ದ ಕುಮಾರಸ್ವಾಮಿಗೆ ಕೇವಲ 19 ಸ್ಥಾನ ಮಾತ್ರ ಗೆಲ್ಲುವುದು ಸಾಧ್ಯವಾಯಿತು. 2018ರಲ್ಲಿ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂದು ಕಾಂಗ್ರೆಸ್ ಹೈ ಕಮಾಂಡ್ ಮುಖ್ಯಮಂತ್ರಿ ಹುದ್ದೆಯನ್ನು ಕುಮಾರಸ್ವಾಮಿಯ ಮನೆಬಾಗಿಲಿಗೆ ಒಯ್ದುಕೊಟ್ಟು, 5 ವರ್ಷ ಅಧಿಕಾರ ನಡೆಸಿ ಅಂತ ಹೇಳಿತ್ತು. ಆದರೆ, ಅವರು ವೆಸ್ಟ್ ಎಂಡ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿ ಅಧಿಕಾರ ನಡೆಸಿದರು. ಆಮೇಲೆ ಅವರು ಅಮೆರಿಕ ಹೋದಾಗ ಇಲ್ಲಿ ಕುರಿ ವ್ಯಾಪಾರ ನಡೆದು ಕೇವಲ 14 ತಿಂಗಳಲ್ಲಿ ಸರ್ಕಾರ ಬಿದ್ಹೋಯ್ತು ಎಂದು ವೆಂಕಟರಣಪ್ಪ ಹೇಳಿದರು. ಅಂಥ ಬಿಜೆಪಿ ಜೊತೆ ಕುಮಾರಸ್ವಾಮಿ ಲೋಕಸಭಾ ಚುನಾವಣೆಗಾಗಿ ಗೆಳೆತನ ಬೆಳೆಸಿ 4 ಸೀಟುಗಳನ್ನು ಭಿಕ್ಷೆ ಬೇಡುತ್ತಿದ್ದಾರೆ ಎಂದು ಅವರು ಜರಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.