ರಾಮನಗರ ಮತ್ತು ಚನ್ನಪಟ್ಟಣಗಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳ ವಿವರ ನೀಡಿದ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Nov 08, 2024 | 7:49 PM

ತನ್ನನ್ನು ಬೆಳೆಸಿದ್ದು ಚನ್ನಪಟ್ಟಣದ ಜನ, ಇವತ್ತು ಕೇಂದ್ರದಲ್ಲಿ ಸಚಿವನಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪಕ್ಕದಲ್ಲಿ ಕೂರುವ ಸೌಭಾಗ್ಯ ತನಗೆ ಸಿಕ್ಕಿದ್ದು ಇಲ್ಲಿಯ ಜನರ ಪ್ರೀತಿ ವಿಶ್ವಾಸಗಳಿಂದ, ತನ್ನನ್ನು ಮನೆ ಮಗನಾಗಿ ಬೆಳೆಸಿದ ಜನರ ಕೈ ಯಾವತ್ತೂ ಬಿಡಲ್ಲ, ತನ್ನ ಹಾಗೆ ನಿಖಿಲ್ ಕುಮಾರಸ್ವಾಮಿಯನ್ನೂ ಬೆಳೆಸುವಂತೆ ಕುಮಾರಸ್ವಾಮಿ ಕೋರಿದರು.

ರಾಮನಗರ: ಚನ್ನಪಟ್ಟಣ ಕ್ಷೇತ್ರದ ನಿಡಗೋಡಿಯಲ್ಲಿ ಮಗನಿಗಾಗಿ ಚುನಾವಣಾ ಪ್ರಚಾರ ಮಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರಗಳಿಗೆ ತಾವು ಮತ್ತು ಮಾಜಿ ಪ್ರಧಾನಿ ದೇವೇಗೌಡರು ಮಾಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ನೀಡಿದರು. 1983ರಲ್ಲಿ ದೇವೇಗೌಡರು ಇಗ್ಲೂರ್ ಜಲಾಶಯ ಕಟ್ಟಿಸಿದ ಬಳಿಕ ಮಾಗಡಿ, ರಾಮನಗರ ಮತ್ತು ಚನ್ನಪಟ್ಟಣ ತಾಲ್ಲೂಕುಗಳಿಗೆ ನೀರು ಕೊಡುವ ಕೆಲಸವನ್ನು ತಾನು ಮಾಡಿದ್ದಾಗಿ ಹೇಳಿದ ಕುಮಾರಸ್ವಾಮಿ ₹550 ಕೋಟಿ ವೆಚ್ಚದಲ್ಲಿ ಕೆರೆಗಳಿಗೆ ನೀರು ತುಂಬಸುವ ಕೆಲಸವೂ ತಮ್ಮಿಂದಾಗಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಯೋಗೇಶ್ವರ್ ಜೆಡಿಎಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಿಗೆ ಟೋಪಿ ಹಾಕಿದರು: ಕುಮಾರಸ್ವಾಮಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.