ಮಗನ ಸೋಲನ್ನು ಕುಮಾರಸ್ವಾಮಿ ಸಮಾವೇಶದ ನಡೆಸುವ ಮೂಲಕ ಸೆಲಿಬ್ರೇಟ್ ಮಾಡುತ್ತಾರೆಯೇ? ಚಲುವರಾಯಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Dec 06, 2024 | 6:12 PM

ಕಾಂಗ್ರೆಸ್ ಪಕ್ಷವನ್ನು ಜೆಡಿಎಸ್ ಮುಟ್ಟಲಾಗಲ್ಲ, ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿಯವರು ಗೆದ್ದಿದ್ದು ಪ್ರಧಾನಿ ಮೋದಿ ಅವರಿಂದಾಗಿ. ತಮ್ಮ ನಾಮಬಲದಿಂದ ಅವರು ಗೆಲ್ಲಬಹುದಾಗಿದ್ದರೆ, ಚನ್ನಪಟ್ಟಣದಲ್ಲಿ ಮಗನನ್ನು ಗೆಲ್ಲಿಸಿಕೊಳ್ಳುತ್ತಿದ್ದರು ಎಂದ ಚಲುವರಾಯಸ್ವಾಮಿ ಹೇಳಿದರು.

ಮೈಸೂರು: ಮಂಡ್ಯದಲ್ಲಿ ಜೆಡಿಎಸ್ ನಡೆಸಲಿರುವ ಸಮಾವೇಶವನ್ನು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಗೇಲಿ ಮಾಡಿದರು. ಮಗನ ಸೋಲಿನಿಂದ ಕುಮಾರಸ್ವಾಮಿ ಪಾಠ ಕಲಿತ ಹಾಗಿಲ್ಲ, ಅವನು ಸೋತಿದ್ದಾನೆ ಅಂತ ಸಮಾವೇಶ ಮಾಡುತ್ತಾರೆಯೇ? ನಿಖಿಲ್ ಬಗ್ಗೆ ತಾನು ಮಾತಾಡಲ್ಲ, ಅವನು ತಮ್ಮ ಮುಂದೆ ಬೆಳೆದಿರುವ ಹುಡುಗನಾಗಿರುವುದರಿಂದ ಪ್ರೀತಿಯಿದೆ, ಅದರೆ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಮಗ ಅನುಭವಿಸಿದ ಸೋಲನ್ನು ಮಂಡ್ಯದಲ್ಲಿ ಸಮಾವೇಶ ನಡೆಸುವ ಮೂಲಕ ಸೆಲಿಬ್ರೇಟ್ ಮಾಡುತ್ತಾರೆಯೇ? ನಿಖಿಲ್ ಸೋಲಿಗೆ ದೇವೇಗೌಡ ಮತ್ತು ಕುಮಾರಸ್ವಾಮಿಯೇ ಕಾರಣ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮಂಡ್ಯ: ಬಾರ್​ಗೆ ಪರವಾನಗಿ ನೀಡಲು ಲಂಚ ಕೇಳಿದ ಆರೋಪ, ಎಫ್​ಐಆರ್ ದಾಖಲಾದರೆ ಚಲುವರಾಯಸ್ವಾಮಿಗೂ ಸಂಕಷ್ಟ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.