AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls: ಕುಮಾರಸ್ವಾಮಿ ಸಾಧನೆ ಶೂನ್ಯ, ಅದನ್ನು ಮುಚ್ಚಿಹಾಕಲು ನನ್ನ ಬಗ್ಗೆ ಮಾತಾಡುತ್ತಾ ಕ್ಷುಲ್ಲಕ ರಾಜಕಾರಣ ಮಾಡುತ್ತಾರೆ: ಸುಮಲತಾ ಅಂಬರೀಶ್

Karnataka Assembly Polls: ಕುಮಾರಸ್ವಾಮಿ ಸಾಧನೆ ಶೂನ್ಯ, ಅದನ್ನು ಮುಚ್ಚಿಹಾಕಲು ನನ್ನ ಬಗ್ಗೆ ಮಾತಾಡುತ್ತಾ ಕ್ಷುಲ್ಲಕ ರಾಜಕಾರಣ ಮಾಡುತ್ತಾರೆ: ಸುಮಲತಾ ಅಂಬರೀಶ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Apr 20, 2023 | 7:16 PM

Share

ಕುಮಾರಸ್ವಾಮಿಯವರು ಮಂಡ್ಯ ಜಿಲ್ಲೆಗೆ ಅವರು ಏನನ್ನೂ ಮಾಡಿಲ್ಲ, ಮುಖ್ಯಮಂತ್ರಿಯಾಗಿ ಅವರ ಸಾಧನೆ ಶೂನ್ಯ ಎಂದು ಸುಮಲತಾ ಹೇಳಿದರು,

ಮಂಡ್ಯ: ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮತ್ತು ಜೆಡಿಎಸ್ ಪಕ್ಷದ ನಾಯಕರು ಕ್ಷುಲ್ಲಕ ರಾಜಕಾರಣ (petty politics) ಮಾಡುತ್ತಿದ್ದಾರೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಇಂದು ನಗರದಲ್ಲಿ ಜರಿದರು. ಪತ್ರಿಕಾ ಗೋಷ್ಟಿಯೊಂದರಲ್ಲಿ ಮಾತಾಡಿದ ಸುಮಲತಾ, ಕಳೆದ 5 ವರ್ಷಗಳಲ್ಲಿ ಒಂದು ವರ್ಷ ಕಾಲ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರ ಸಾಧನೆ ಶೂನ್ಯ. ಮಂಡ್ಯ ಜಿಲ್ಲೆಗೆ ಅವರು ಏನನ್ನೂ ಮಾಡಿಲ್ಲ. ಅಭಿವೃದ್ಧಿ ಕೆಲಸಗಳನ್ನು ಮಾಡದ ಕಾರಣ ಹೇಳಿಕೊಳ್ಳಲು ಅವರ ಬಳಿ ಏನೂ ಇಲ್ಲ. ಹಾಗಾಗೇ ಅದನ್ನು ಮುಚ್ಚಿಹಾಕಲು ಸುಖಾಸುಮ್ಮನೆ ತಮ್ಮನ್ನು ಟಾರ್ಗೆಟ್ ಮಾಡುತ್ತಾರೆ ಎಂದು ಸಂಸದೆ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.