Union Budget 2024: ಕರ್ನಾಟಕಕ್ಕೆ ಅನುದಾನ ಯಾಕಿಲ್ಲ ಅಂದ್ರೆ ಬೊಮ್ಮಾಯಿ ಹೇಳಿದ್ದನ್ನೇ ಕುಮಾರಸ್ವಾಮಿ ಹೇಳಿದರು!

Updated on: Jul 23, 2024 | 8:00 PM

Union Budget 2024: ಪ್ರತಿಬಾರಿ ಬಜೆಟ್ ಮಂಡನೆಯಾದಾಗ ರಾಜ್ಯಗಳ ವಿರೋಧ ಪಕ್ಷಗಳು ಅಪಸ್ವರ ಎತ್ತುವುದನ್ನು ಶುರುವಿಟ್ಟುಕೊಳ್ಳುತ್ತವೆ, ಆದರೆ ಅದೆಲ್ಲ ಚರ್ಚೆಗಷ್ಟೇ ಸೀಮಿತ ಎಂದು ಕುಮಾರಸ್ವಾಮಿ ಹೇಳಿದರು. ಅವರು ಈಗ ಕೇಂದ್ರ ಸಚಿವರು, ತಮ್ಮ ಸರ್ಕಾರವನ್ನು ಬಿಟ್ಟುಕೊಟ್ಟಾರೆಯೇ?

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಕರ್ನಾಟಕ್ಕೆ ಏನೂ ಕೊಟ್ಟಿಲ್ಲ ಅಂತ ಕೇಳಿದಾಗ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ್ ಬಸವರಾಜ ಬೊಮ್ಮಯಿ ನೀಡಿದ ಉತ್ತರವನ್ನೇ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸಹ ನೀಡಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕುಮಾರಸ್ವಾಮಿ ಬಜೆಟ್ ಭಾಷಣ ಓದುವಾಗ ರಾಜ್ಯಗಳ ಹೆಸರುಗಳನ್ನು ಉಲ್ಲೇಖಿಸುವುದಿಲ್ಲ, ರಾಜ್ಯದ ಬಜೆಟ್ ಮಂಡನೆ ಸಮಯದಲ್ಲೂ ಜಿಲ್ಲೆಗಳ ಹೆಸರುಗಳನ್ನು ಹೇಳುವುದಿಲ್ಲ, ಅದರೆ ಕೇಂದ್ರದಿಂದ ಇಲಾಖೆಗಳಿಗೆ ಬಿಡುಗಡೆಯಾಗುವ ಹಣ ಎಲ್ಲ ರಾಜ್ಯಗಳಿಗೆ ಹೋಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು. ಉದಾಹರಣೆಗೆ ಗ್ರಾಮೀಣಾಭಿವೃದ್ಧಿ ಇಲಾಖೆಗೆ ₹2.65 ಲಕ್ಷ ಕೋಟಿ ಹಣ ಮೀಸಲಿಡಲಾಗಿದೆ. ಆ ಹಣ ಕರ್ನಾಟಕವೂ ಸೇರಿ ಎಲ್ಲ ರಾಜ್ಯಗಳಿಗೆ ಹಂಚಿಕೆಯಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಅಧಿಕಾರ ದುರುಪಯೋಗದ ಬಗ್ಗೆ ಪ್ರತಿಭಟನೆ ನಡೆಸುವ ನೈತಿಕತೆ ಸಿದ್ದರಾಮಯ್ಯ ಸರ್ಕಾರಕ್ಕಿಲ್ಲ: ಕುಮಾರಸ್ವಾಮಿ   

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More