AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜನತಾ ಜಲಧಾರೆ ಯಾತ್ರೆ ಆರಂಭಿಸುವ ಮೊದಲು ಎಲ್ಲ ಪ್ರಾರ್ಥನಾ ಸ್ಥಳಗಳಿಗೆ ಭೇಟಿ ನೀಡಿದರು!

ಅವರ ಜೊತೆ ಪಕ್ಷದ ಕೆಲ ನಾಯಕರು ಸಹ ಇದ್ದಾರೆ. ಕುಮಾರಸ್ವಾಮಿ ರಾಮನಗರವನ್ನು ತಮ್ಮ ಕರ್ಮಭೂಮಿ ಎಂದು ಭಾವಿಸುವುದರಿಂದ ತಮ್ಮ ಎಲ್ಲ ಹೊಸ ಕಾರ್ಯಗಳನ್ನು ರೇಷ್ಮೆ ನಗರದಿಂದಲೇ ಆರಂಭಿಸುತ್ತಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜನತಾ ಜಲಧಾರೆ ಯಾತ್ರೆ ಆರಂಭಿಸುವ ಮೊದಲು ಎಲ್ಲ ಪ್ರಾರ್ಥನಾ ಸ್ಥಳಗಳಿಗೆ ಭೇಟಿ ನೀಡಿದರು!
ದರ್ಗಾನಲ್ಲಿ ಕುಮಾರಸ್ವಾಮಿ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Apr 12, 2022 | 8:12 PM

Share

ರಾಮನಗರ: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮತ್ತು ಅವರು ಪಕ್ಷ ಜೆಡಿ(ಎಸ್)ನ ಮಹತ್ವಾಕಾಂಕ್ಷೆಯ ಜನತಾ ಜಲಧಾರೆ ಯಾತ್ರೆ (Janata Jaladhare Yatre) ಮಂಗಳವಾರದಂದು ಶುರುವಾಗಿದೆ. ಯಾತ್ರೆ ಆರಂಭಿಸುವ ಮೊದಲು ಕುಮಾರಸ್ವಾಮಿ ಅವರು ರಾಮನಗರದಲ್ಲಿ (Ramanagara) ದೇವಸ್ಥಾನ ಚರ್ಚ್ ಮತ್ತು ದರ್ಗಾಗೆ ತೆರಳಿ ಪ್ರಾರ್ಥನೆಗಳನ್ನು ಸಲ್ಲಿಸಿದರು. ಒಂದು ಯೋಜನೆ ಅಥವಾ ಅಭಿಯಾನ ಅರಂಭಿಸುವ ಮೊದಲು ಅವರು ಎಲ್ಲ ದರ್ಮಗಳ ಪ್ರಾರ್ಥನಾ ಸ್ಥಳಗಳಿಗೆ ಬೇಟಿ ನೀಡಿ ಪ್ರಾರ್ಥನೆ ಸಲ್ಲಿಸುವ ಪರಿಪಾಠ ಪಾಲಿಸುತ್ತಾ ಬಂದಿದ್ದಾರೆ. ಮಂಗಳವಾರದಂದು ಸಹ ಅದನ್ನು ಮಾಡಿದರು. ಈ ವಿಡಿಯೋನಲ್ಲಿ ಅವರು ಇತ್ತೀಚಿಗಷ್ಟೇ ಕಾಂಗ್ರೆಸ್ ತೊರೆದು ಜೆಡಿ(ಎಸ್) ಪಕ್ಷಕ್ಕೆ ವಾಪಸ್ಸು ಬಂದಿರುವ ಹಿರಿಯ ಮುಸ್ಲಿಂ ನಾಯಕ ಸಿ ಎಮ್ ಇಬ್ರಾಹಿಂ ಅವರ ಜೊತೆ ರಾಮನಗರದಲ್ಲಿರುವ ದರ್ಗಾವೊಂದಕ್ಕೆ ಬಂದಿರುವುದನ್ನು ನೀವು ಕಾಣಬಹುದು.

ದರ್ಗಾನಲ್ಲಿ ಕುಮಾರಸ್ವಾಮಿ ಚಾದರ್ ಹೊದೆಸುತ್ತಿರುವುದನ್ನು ಸಹ ನೀವು ನೋಡಬಹುದು. ಅವರ ಜೊತೆ ಪಕ್ಷದ ಕೆಲ ನಾಯಕರು ಸಹ ಇದ್ದಾರೆ. ಕುಮಾರಸ್ವಾಮಿ ರಾಮನಗರವನ್ನು ತಮ್ಮ ಕರ್ಮಭೂಮಿ ಎಂದು ಭಾವಿಸುವುದರಿಂದ ತಮ್ಮ ಎಲ್ಲ ಹೊಸ ಕಾರ್ಯಗಳನ್ನು ರೇಷ್ಮೆ ನಗರದಿಂದಲೇ ಆರಂಭಿಸುತ್ತಾರೆ.

ಮುಸ್ಲಿಂ ಸಮುದಾಯದ ನಡುವೆ ಕುಮಾರ ಸ್ವಾಮಿ ನಿಸ್ಸಂದೇಹವಾಗಿ ಜನಪ್ರಿಯ ನಾಯಕರು ಮಾರಾಯ್ರೇ. ಅವರು ದರ್ಗಾದ ಬಳಿ ಬರೋದು ಗೊತ್ತಾಗುತ್ತಿದ್ದಂತೆಯೇ ಸಾವಿರಾರು ಮುಸಲ್ಮಾನರು ಅಲ್ಲಿಗೆ ದೌಡಾಯಿಸಿದರು. ಅವರೊಂದಿಗೆ ಹಸ್ತಲಾಘವ ಮಾಡಲು ಸೆಲ್ಫೀ ತೆಗೆದುಕೊಳ್ಳಲು ಜನ ಮುಗಿ ಬೀಳುತ್ತಿರುವುದನ್ನು ವಿಡಿಯೋನಲ್ಲಿ ಕಾಣಬಹುದು.

ಇದನ್ನೂ ಓದಿ:  JDS: ಜನತಾ ಜಲಧಾರೆ -ಜಲ ಸಂಗ್ರಹಕ್ಕೆ ಹೊರಟ 15 ಗಂಗಾ ರಥಗಳನ್ನು ಬೀಳ್ಕೊಟ್ಟ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!