ನಮ್ಮಿಂದ ಸಿಎಂ ಆದವರು ನಮ್ಮನ್ನು ಕೊಚ್ಚೆ ಎಂದರೆ ಅವರು ಸಹ ಕೊಚ್ಚೆ ಅಲ್ವಾ? ಹೆಚ್ ಸಿ ಬಾಲಕೃಷ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Nov 15, 2024 | 6:16 PM

ಒಕ್ಕಲಿಗರ ಧೀಮಂತ ನಾಯಕ ಮತ್ತು ಮಾಜಿ ಪ್ರಧಾನಿಯಾಗಿರುವ ಹೆಚ್ ಡಿ ದೇವೇಗೌಡ ಅವರು ರಾಜ್ಯದಲ್ಲಿ ಉಪ ಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಅವರನ್ನು, ನೂರು ರೂಪಾಯಿಗಳಿಗೆ ರೌಡಿಯೊಬ್ಬನ ಬಳಿ ಕೆಲಸಕ್ಕಿದ್ದೋನು, ರೌಡಿಗಳಿಗೆ ಟೀ ಸರಬರಾಜು ಮಾಡುತ್ತಿದದವನು ಅಂತ ಹೇಳೋದು ಸರಿಯೇ ಎಂದು ಬಾಲಕೃಷ್ಣ ಪ್ರಶ್ನಿಸಿದರು.

ಬೆಂಗಳೂರು: ಬಿಎಸ್ ಯಡಿಯೂರಪ್ಪನವರು ಹೆಚ್ ಡಿ ಕುಮಾರಸ್ವಾಮಿ ಬಗ್ಗೆ ಏನೆಲ್ಲ ಮಾತಾಡಿದಾಗ, ನನ್ನನ್ನು ಮುಖ್ಯಮಂತ್ರಿ ಮಾಡಿದ್ದು ಯಡಿಯೂರಪ್ಪ ಅಲ್ಲ; ಪುಟ್ಟಣ್ಣ, ಚಲುವರಾಯಸ್ವಾಮಿ, ಬಾಲಕೃಷ್ಣ ಮತ್ತು ಜಮೀರ್ ಅಹ್ಮದ್ ಅವರ ನೆರವಿನಿಂದ ಸಿಎಂ ಆಗಿದ್ದು ಅಂತ ಹೇಳಿದ್ದರು, ಈಗ ನಾವು ನಾಲ್ವರನ್ನು ಕುಮಾರಸ್ವಾಮಿ ಕೊಚ್ಚೆ ಅನ್ನುತ್ತಾರೆಂದರೆ ಸರಿ, ಕೊಚ್ಚೆಯನ್ನು ತಬ್ಬಿಕೊಂಡ ಅವರು ಸಹ ಕೊಚ್ಚೆ ತಾನೇ ಎಂದು ಮಾಗಡಿ ಕಾಂಗ್ರೆಸ್ ಶಾಸಕ ಹೆಚ್ ಸಿ ಬಾಲಕೃಷ್ಣ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಪುಟ್ಟರಾಜು ಮಂಡ್ಯಕ್ಕೆ ಅಭ್ಯರ್ಥಿ ಅಂತ ಫಿಕ್ಸ್ ಆಗಿತ್ತು, ಕೊನೆ ಘಳಿಗೆಯಲ್ಲಿ ಕುಮಾರಸ್ವಾಮಿ ಮದುವೆ ಗಂಡಾದರು: ಬಾಲಕೃಷ್ಣ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.