ಸಮಯ ಬಂದಾಗ ಕುಮಾರಸ್ವಾಮಿ ವಿಷಯ ಜನರ ಮುಂದೆ ಬಿಚ್ಚಿಡುತ್ತೇವೆ: ಡಿಕೆ ಸುರೇಶ್, ಸಂಸದ

ಅರುಣ್​ ಕುಮಾರ್​ ಬೆಳ್ಳಿ

Updated on: Oct 09, 2023 | 3:09 PM

ಶಿವಕುಮಾರ್ ಪುನಃ ತಿಹಾರ್ ಜೈಲಿಗೆ ಹೋಗುತ್ತಾರೆ ಅಂತ ಕುಮಾರಸ್ವಾಮಿ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಸುರೇಶ್, ಕುಮಾರಸ್ವಾಮಿ ಮೊನ್ನೆ ದೆಹಲಿಗೆ ಹೋದಾಗ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಇದನ್ನೇ ಚರ್ಚಿಸಿರುವಂತಿದೆ. ಅವರೇನು ಮಾಡ್ತಾರೋ ಮಾಡಲಿ, ಮಿಕ್ಕಿದ್ದನ್ನು ಕಾಲವೇ ನಿರ್ಣಯಿಸುತ್ತದೆ ಎಂದರು.

ಬೆಂಗಳೂರು: ಇದನ್ನು ನಿರೀಕ್ಷಿಸಲಾಗಿತ್ತು. ನಿನ್ನೆ ಬಿಡದಿಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು (HD Kumaraswamy) ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮೇಲೆ ತೀವ್ರ ವಾಗ್ದಾಳಿ ನಡೆಸಿದ ಬಳಿಕ; ಶಿವಕುಮಾರ್ ಅಥವಾ ಅವರ ಸಹೋದರ ಸಂಸದ ಡಿಕೆ ಸುರೇಶ್ (DK Suresh) ಅಷ್ಟೇ ತೀಕ್ಷ್ಣವಾದ ಪ್ರತಿಕ್ರಿಯೆ ನೀಡುವುದು ನಿಶ್ಚಿತ ಅಂತ ಕನ್ನಡಿಗರಿಗೆ ಗೊತ್ತಿತ್ತು. ಬೆಂಗಳೂರಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸುರೇಶ್, ಕುಮಾರಸ್ವಾಮಿಗೆ ಶಿವಕುಮಾರ್ ಬಗ್ಗೆ ಮಾತಾಡದೇ ಹೋದರೆ ನಿದ್ರೆ ಬರಲ್ಲ, ಹಾಗಾಗೇ ಟೀಕೆ ಮಾಡುತ್ತ್ತಿರುತ್ತಾರೆ ಎಂದು ಹೇಳಿದರು. ಶಿವಕುಮಾರ್ ಪುನಃ ತಿಹಾರ್ ಜೈಲಿಗೆ ಹೋಗುತ್ತಾರೆ ಅಂತ ಕುಮಾರಸ್ವಾಮಿ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಸುರೇಶ್, ಕುಮಾರಸ್ವಾಮಿ ಮೊನ್ನೆ ದೆಹಲಿಗೆ ಹೋದಾಗ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಇದನ್ನೇ ಚರ್ಚಿಸಿರುವಂತಿದೆ. ಅವರೇನು ಮಾಡ್ತಾರೋ ಮಾಡಲಿ, ಮಿಕ್ಕಿದ್ದನ್ನು ಕಾಲವೇ ನಿರ್ಣಯಿಸುತ್ತದೆ ಎಂದರು. ಸಮಯ ಸಂದರ್ಭ ಬಂದಾಗ ಕುಮಾರಸ್ವಾಮಿ ವಿಷಯಗಳನ್ನು ಜನರ ಮುಂದೆ ಬಿಚ್ಚಿಡುತ್ತೇವೆ ಎಂದು ಸುರೇಶ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.