ಉಡುಪಿ: ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಮುಳುಗಿ ಬಾಲಕ ಸಾವು; ಕೊನೆ ಕ್ಷಣದ ವೀಡಿಯೋ ಸೆರೆ

Edited By: ಕಿರಣ್ ಹನುಮಂತ್​ ಮಾದಾರ್

Updated on: Apr 12, 2024 | 3:45 PM

ಕುಂದಾಪುರ(Kundapura) ತಾಲೂಕಿನ ಹೆಂಗವಳ್ಳಿಯ ಶಂಕರನಾರಾಯಣದ ಟಿನ್ ಟಾನ್ ಎಡ್ವೆಂಚರ್ಸ್ ರೆಸಾರ್ಟ್‌ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ನಿನ್ನೆ(ಏ.11) ಮಧ್ಯಾಹ್ನ ರೆಸಾರ್ಟ್‌ನ ಈಜುಕೊಳದಲ್ಲಿ (Swimming pool) ಮುಳುಗಿ ಬಾಲಕನೋರ್ವ ಸಾವನ್ನಪ್ಪಿದ್ದಾನೆ.

ಉಡುಪಿ, ಏ.12: ಜಿಲ್ಲೆಯ ಕುಂದಾಪುರ(Kundapura) ತಾಲೂಕಿನ ಹೆಂಗವಳ್ಳಿಯ ಶಂಕರನಾರಾಯಣದ ಟಿನ್ ಟಾನ್ ಎಡ್ವೆಂಚರ್ಸ್ ರೆಸಾರ್ಟ್‌ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ನಿನ್ನೆ(ಏ.11) ಮಧ್ಯಾಹ್ನ ರೆಸಾರ್ಟ್‌ನ ಈಜುಕೊಳದಲ್ಲಿ (Swimming pool) ಮುಳುಗಿ ಬಾಲಕನೋರ್ವ ಸಾವನ್ನಪ್ಪಿದ್ದಾನೆ. ಹೂಡೆಯ ಮೊಹಮ್ಮದ್‌ ಅಝೀಝ್‌ (10) ಮೃತ ಬಾಲಕ. ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಹತ್ತಾರು ಜನ ಇದ್ದರೂ ಕೂಡ ಸಾವಿನಿಂದ ಪಾರಾಗಲು ಸಾಧ್ಯವಾಗಿಲ್ಲ. ಹೌದು, ಬಾಲಕ ಮುಳುಗುತ್ತಿದ್ದರೂ ಹತ್ತಿರದಲ್ಲಿದ್ದ ಯಾರೊಬ್ಬರಿಗೂ ಗೊತ್ತಾಗಿರಲಿಲ್ಲ. ಇನ್ನು ಈದ್‌ ಹಬ್ಬದ ರಜೆ ಪ್ರಯುಕ್ತ ಕುಟುಂಬದ ಜೊತೆಗೆ ಅಝೀಝ್‌ ತೆರಳಿದ್ದ. ಅಝೀಝ್‌ ಕೊನೆಯ ಕ್ಷಣದ ವೀಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More