ಸಂಬಂಧದಲ್ಲಿ ಶಿವಕುಮಾರ್ ಷಡ್ಡಕರಾಗಿರುವ ರಂಗನಾಥ್​ಗೆ ನೀರು ಪಡೆಯಲು ಕಷ್ಟವಾಗಬಾರದು: ಸುರೇಶ್ ಗೌಡ

Updated on: Jul 04, 2025 | 5:20 PM

ರಂಗನಾಥ್ ಅವರಿಗೆ ಎತ್ತಿನಹೊಳೆ ಯೋಜನೆಯಿಂದಲೂ ನೀರು ಪಡೆದುಕೊಳ್ಳುವ ಅವಕಾಶವಿದೆ, ಕುಣಿಗಲ್ ಶಾಸಕ ತಮ್ಮ ಅಭಿಪ್ರಾಯ ಹೇಳಲು ಮುಕ್ತರು, ಆದರೆ ಪ್ರಾಯಶಃ ಇನ್ನಾರು ತಿಂಗಳಲ್ಲಿ ಮುಖ್ಯಮಂತ್ರಿಯಾಗಲಿರುವ ಪ್ರಭಾವಿ ರಾಜಕಾರಣಿಯ ಸಂಬಂಧಿಯಾಗಿ ಆತ್ಮಹತ್ಯೆಯಂಥ ಮಾತಾಡಬಾರದು, ನೀರನ್ನು ಪಡೆಯಲು ಒಂದಲ್ಲ ಹತ್ತಾರು ಮಾರ್ಗಗಗಳಿವೆ ಎಂದ ಸುರೇಶ್ ಗೌಡ ಹೇಳಿದರು.

ಬೆಂಗಳೂರು, ಜುಲೈ 4: ನೀರು ಹರಿಯುವ ಮೂಲ (course of water) ವಿನ್ಯಾಸವನ್ನು ಬದಲಾಯಿಸಬಾರದು, ಅದನ್ನು ನೈಸರ್ಗಿಕವಾಗಿ ಹರಿಯಲು ಬಿಡಬೇಕು, ನಮ್ಮ ಭಾಗದ ರೈತರು ನೀರು ಹರಿಯುವಿಕೆ ವಿರುದ್ಧ ಚೆಲ್ಲಾಟವಡೋದನ್ನು ಸಹಿಸಲಾರರು ಎಂದು ಬಿಜೆಪಿ ಶಾಸಕ ಬಿ ಸುರೇಶ್ ಗೌಡ ಹೇಳಿದರು. ಕುಣಿಗಲ್​ಗೆ ಹೇಮಾವತಿ ನೀರು ಸಿಕ್ಕಿಲ್ಲಾಂದ್ರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯೊಡ್ಡಿರುವ ಅಲ್ಲಿನ ಶಾಸಕ ಡಾ ರಂಗನಾಥ್ ಅವರಿಗೆ ಅಂಥ ಪ್ರಮೇಯವೇನೂ ಇಲ್ಲ, ನೀರಾವರಿ ಸಚಿವ ಡಿಕೆ ಶಿವಕುಮಾರ್ ಅವರ ಷಡ್ಡಕರಾಗಿರುವುದರಿಂದ ಶಾಸಕನಿಗೆ ನೀರು ಪಡೆದುಕೊಳ್ಳುವುದು ಕಷ್ಟವೇನೂ ಆಗಲಾರದು, ಕಾವೇರಿ ಜಲಾನಯ ಪ್ರದೇಶದಿಂದ ಅವರು ತಮ್ಮ ಕ್ಷೇತ್ರಕ್ಕೆ ನೀರನ್ನು ಪಡೆದುಕೊಳ್ಳಬಹುದು ಎಂದ ಸುರೇಶ್ ಹೇಳಿದರು.

ಇದನ್ನೂ ಓದಿ:   ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಶಾಸಕ ಸುರೇಶ್ ಗೌಡ ಹೇಳಿದ್ದೇನು? ಇಲ್ಲಿದೆ ನೋಡಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More