ತುಮಕೂರು ನಾಗೇಶ್ ಕೊಲೆ ಪ್ರಕರಣ: ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಅಪ್ಪನನ್ನು ಮಗನೇ ಗತಿ ಕಾಣಿಸಿದನೇ?

ಅರುಣ್​ ಕುಮಾರ್​ ಬೆಳ್ಳಿ

Updated on: May 14, 2025 | 7:57 PM

ಕೊಲೆಯ ಹಿಂದಿನ ಉದ್ದೇಶವನ್ನು ಪೊಲೀಸರು ತನಿಖೆ ಮಾಡಿದಾಗ ಆಘಾತಕಾರಿ ಅಂಶವೊಂದು ಬೆಳಕಿಗೆ ಬಂದಿದೆ. ನಾಗೇಶ್ ತನ್ನ ಸ್ವಂತ ಮಗಳಿಗೆ ಅಂದರೆ ಸೂರ್ಯನ ಸಹೋದರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರಂತೆ, ಇದನ್ನು ಸಹಿಸಲಾಗದೆ ಸೂರ್ಯ ಅಪ್ಪನನ್ನೇ ಮುಗಿಸಿದ ಅಂತ ಹೇಳಲಾಗುತ್ತಿದೆ. ಕೊಲೆಗೆ ಆಸ್ತಿ ವಿವಾದವೂ ಕಾರಣವಾಗಿರಬಹುದೆನ್ನುವ ಸಂದೇಹವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ತುಮಕೂರು, ಮೇ 14: ತುಮಕೂರಿನ ಐಸ್ ಕ್ರೀಂ ಫ್ಯಾಕ್ಟರಿ ಮಾಲೀಕ (ice cream factory owner) ನಾಗೇಶ್ ಕೊಲೆ ಪ್ರಕರಣವನ್ನು ಕುಣಿಗಲ್ ಪೊಲೀಸರು ಕ್ರ್ಯಾಕ್ ಮಾಡಿರುವಂತಿದೆ. ನಾವು ಈಗಾಗಲೇ ವರದಿ ಮಾಡಿರುವಂತೆ ಮೇ 11ರಂದದು ನಾಗೇಶ್ ತಮ್ಮ ಐಸ್ ಕ್ರೀಂ ಫ್ಯಾಕ್ಟರಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಪೊಲೀಸರು ಲಭ್ಯವಿದ್ದ ಸಿಸಿಟಿವಿ ಫುಟೇಜ್ ಪರಿಶೀಲಿಸಿದಾಗ ಮೇ 10ರಂದು ರಾತ್ರಿ ಇಬ್ಬರು ಯುವಕರು ಫ್ಯಾಕ್ಟರಿಯಲ್ಲೇ ನಾಗೇಶ್ ಮೇಲೆ ಹಲ್ಲೆ ಮಾಡೋದು ನಂತರ ಬಟ್ಟೆಯೊಂದನ್ನು ಅವರ ಕುತ್ತಿಗೆಗೆ ಬಿಗಿದು ಉಸಿರುಗಟ್ಟಿಸಿ ಸಾಯಿಸುವ ದೃಶ್ಯ ಸೆರೆಯಾಗಿದೆ. ಪೊಲೀಸರು ಫುಟೇಜನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಇಬ್ಬರು ಯುವಕರಲ್ಲಿ ಒಬ್ಬ ಮೃತ ನಾಗೇಶ್ ಅವರ ಮಗ ಸೂರ್ಯ ಅನ್ನೋದು ಗೊತ್ತಾಗಿದೆ.

ಇದನ್ನೂ ಓದಿ:  ಒಂದೇ ರಾತ್ರಿ ಎರಡು ಕೊಲೆ, 1 ಅನುಮಾನಸ್ಪದ ಶವ ಪತ್ತೆ: 3 ಮೃತದೇಹ ಕಂಡು ಬೆಚ್ಚಿಬಿದ್ದ ಚಿಂತಾಮಣೆ ಜನ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.