ಕರ್ನೂಲ್ ಬಸ್ ದುರಂತ; ಮೃತರ ಕುಟುಂಬಗಳಿಗೆ ಆಂಧ್ರ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

Updated on: Oct 24, 2025 | 5:26 PM

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 19 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಬಸ್‌ಗೆ ಡಿಕ್ಕಿ ಹೊಡೆದ ಬೈಕ್ ಸವಾರ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 20ಕ್ಕೆ ತಲುಪಿದೆ. ಆಂಧ್ರ ಪ್ರದೇಶ ಸರ್ಕಾರ ಮೃತರಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಗಾಯಾಳುಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ 19 ಪ್ರಯಾಣಿಕರು ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದಾರೆ. ಬೈಕ್ ಸವಾರ ಕೂಡ ಸೇರಿ 20 ಜನರು ಮೃತಪಟ್ಟಿದ್ದಾರೆ.

ಕರ್ನೂಲ್, ಅಕ್ಟೋಬರ್ 24: ಆಂಧ್ರಪ್ರದೇಶದ ಕರ್ನೂಲ್ ಬಸ್ ದುರಂತದಲ್ಲಿ (Kurnool Bus Fire Accident) ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಆಂಧ್ರಪ್ರದೇಶ ಸಾರಿಗೆ ಸಚಿವ ರಾಮ್ ಪ್ರಸಾದ್ ರೆಡ್ಡಿ ಘೋಷಿಸಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ 19 ಪ್ರಯಾಣಿಕರು ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದಾರೆ. ಬೈಕ್ ಸವಾರ ಕೂಡ ಸೇರಿ 20 ಜನರು ಮೃತಪಟ್ಟಿದ್ದಾರೆ.

ಇಂದು ಮುಂಜಾನೆ 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಒಂದು ಬೈಕ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಾಗ ಈ ದುರಂತ ಸಂಭವಿಸಿದೆ. ಕರ್ನೂಲ್ ಜಿಲ್ಲೆಯ ತಂಡರಪಡು ಗ್ರಾಮದ ಟಿವಿ9 ಕಾಲೋನಿಯ ನಿವಾಸಿ ಮತ್ತು ಗ್ರಾನೈಟ್ ದಿನಗೂಲಿ ಕಾರ್ಮಿಕ ಶಿವಶಂಕರ್ (21) ಎಂದು ಗುರುತಿಸಲಾದ ಮೋಟಾರ್ ಸೈಕಲ್ ಸವಾರ ಕೂಡ ಈ ಘಟನೆಯಲ್ಲಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 20ಕ್ಕೆ ತಲುಪಿದೆ.

ಹೈದರಾಬಾದ್‌ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ಕರ್ನೂಲ್​ನ ಚಿನ್ನಟೇಕುರು ಗ್ರಾಮದ ಬಳಿ ಬೈಕ್​ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿತು. ಬೈಕ್ ಬಸ್‌ನ ಕೆಳಗೆ ಸಿಲುಕಿಕೊಂಡು ಡೀಸೆಲ್ ಟ್ಯಾಂಕ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಭಾರೀ ಬೆಂಕಿ ಬಸ್​ಗೆ ಹರಡಿತು. ಈ ಘಟನೆ ನಡೆದಾಗ ಖಾಸಗಿ ಟ್ರಾವೆಲ್ ಬಸ್ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಆರಂಭದಲ್ಲಿ, ಬಸ್‌ನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಕ್ರಮೇಣ ಬಸ್​​ಗೆ ಪೂರ್ತಿ ಹರಡಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More