ಕರ್ನೂಲ್ ಬಸ್ ದುರಂತ: ಪವಾಡಸದೃಶ ಬದುಕುಳಿದ ಬೆಂಗಳೂರಿನ ನಾಲ್ವರು ಪ್ರಯಾಣಿಕರು

Updated on: Oct 24, 2025 | 4:53 PM

ಕರ್ನೂಲ್ ಬಸ್ ಅಗ್ನಿ ದುರಂತದಲ್ಲಿ ಬೆಂಗಳೂರಿನ ನಾಲ್ವರು ಬದುಕುಳಿದಿದ್ದಾರೆ. ಹೈದರಾಬಾದ್‌ನಿಂದ ಮರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಇವರು ಎಮರ್ಜೆನ್ಸಿ ಎಕ್ಸಿಟ್ ಡೋರ್ ಗ್ಲಾಸ್ ಒಡೆದು ಹೊರಬಂದಿದ್ದಾರೆ. ಜಾಮ್ ಆಗಿದ್ದ ಡೋರ್ ತೆರೆಯಲು ಸಾಧ್ಯವಾಗದಿದ್ದಾಗ, ಧೈರ್ಯದಿಂದ ಗ್ಲಾಸ್ ಒಡೆದು ಅಪಾಯದಿಂದ ಸ್ವತಃ ಪಾರಾಗಿದ್ದಾರೆ. ವಿಡಿಯೋ ನೋಡಿ.

ಬೆಂಗಳೂರು, ಅಕ್ಟೋಬರ್​ 24: ಬೆಳಕಿನ ಹಬ್ಬ ಆಚರಿಸಿಕೊಂಡು ಮನೆಯಿಂದ ಹೊರಟಿದ್ದವರು  ನಡುರಸ್ತೆಯಲ್ಲಿ ಧಗಧಗಿಸಿ ಸುಟ್ಟು ಕರಕಲಾಗಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್​​ನಲ್ಲಿ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ (Bus)​ 20 ಮಂದಿ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. ಇದೇ ಬಸ್​​ನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ ನಾಲ್ವರು ಅದೃಷ್ಟವಶಾತ್​​ ಬದುಕುಳಿದಿದ್ದಾರೆ. ಶಿವ, ಗ್ಲೋರಿಯಾ ಈಸ್ಟಾ, ಸ್ಯಾಮ್, ಚರಿತ್ ಮತ್ತು ಮೊಹಮ್ಮದ್ ಖಾಜಿರ್ ಬದುಕುಳಿದ ಬೆಂಗಳೂರಿನವರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Oct 24, 2025 04:52 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More