ಚಿತ್ರರಂಗದಲ್ಲಿನ ದೊಡ್ಡ ಸಮಸ್ಯೆ ಏನು ಗೊತ್ತಾ? ವಿವರಿಸಿದ ನಟ ರಮೇಶ್​​ ಅರವಿಂದ್​

‘ಚಿತ್ರರಂಗದಲ್ಲಿ ವೃತ್ತಿಪರತೆ ಬೇಕು. ಅರ್ಧ ಗಂಟೆ ಎನ್ನುವುದು ಕೂಡ ತುಂಬಾ ಮುಖ್ಯ. ಇದು ಬದಲಾದ ಸಮಯ. ಪ್ರೇಕ್ಷಕರಿಗೆ ತಮಗೆ ಬೇಕಾದ ಸಮಯದಲ್ಲಿ ಒಟಿಟಿಯಲ್ಲಿ ಕಂಟೆಂಟ್​ ಸಿಗುತ್ತಿದೆ. ಹಾಗಾಗಿ ಅವರು ಚಿತ್ರಮಂದಿರಕ್ಕೆ ಬರುತ್ತಿಲ್ಲ. ಆದ್ದರಿಂದ ನಾವು ಅವರ ಸಮಯಕ್ಕೆ ಗೌರವ ನೀಡಬೇಕು. ಆಗ ನಮಗೆ ಪವರ್​ ಸಿಗುತ್ತದೆ’ ಎಂದು ನಟ, ನಿರ್ದೇಶಕ ರಮೇಶ್ ಅರವಿಂದ್​ ಹೇಳಿದ್ದಾರೆ.

ಚಿತ್ರರಂಗದಲ್ಲಿನ ದೊಡ್ಡ ಸಮಸ್ಯೆ ಏನು ಗೊತ್ತಾ? ವಿವರಿಸಿದ ನಟ ರಮೇಶ್​​ ಅರವಿಂದ್​
|

Updated on: Apr 02, 2024 | 9:04 PM

ನಟ ರಮೇಶ್ ಅರವಿಂದ್​ (Ramesh Aravind) ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ (Kannada Film Industry) ಆ್ಯಕ್ಟೀವ್​ ಆಗಿದ್ದಾರೆ. ಅವರ ಅನುಭವ ಅಪಾರ. ಪತ್ರಕರ್ತರ ಜೊತೆ ಅವರಿಗೆ ಬಹಳ ಕಾಲದಿಂದ ಒಡನಾಟ ಇದೆ. ಇತ್ತೀಚೆಗೆ ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಆಯೋಜಿಸಿದ್ದ ‘ಸಿನಿಮಾ-ಮಾಧ್ಯಮ ಸ್ಥಿತಿಗತಿ’ ಸಂವಾದ ಹಾಗೂ ಸಂಘದ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ರಮೇಶ್​ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಆಗ ಅವರು ಅನೇಕ ವಿಚಾರಗಳನ್ನು ಹಂಚಿಕೊಂಡರು. ‘ಇಂದು ಚಿತ್ರರಂಗದಲ್ಲಿನ ದೊಡ್ಡ ಸಮಸ್ಯೆ ಏನೆಂದರೆ ಪ್ರೊಫೆಷನಲಿಸಂ ಇಲ್ಲ. ಎಷ್ಟು ಗಂಟೆಗೆ ಬರಬೇಕು ಅಂತ ಕೇಳಿದರೆ, 10-10.30ಕ್ಕೆ ಬನ್ನಿ ಅಂತ ಪ್ರೊಡಕ್ಷನ್​ ಮ್ಯಾನೇಜರ್​ ಹೇಳುತ್ತಾನೆ. 10 ಎನ್ನಬೇಕು ಅಥವಾ 10.30 ಎನ್ನಬೇಕು. ಅವೆರಡೂ ಬೇರೆ ಬೇರೆ ಸಮಯ. 10-10.30 ಎಂದರೆ ಏನು ಅರ್ಥ? ಅರ್ಧ ಗಂಟೆ ಎನ್ನುವುದು ಬಹಳ ಮುಖ್ಯ. ಈಗ ಬದಲಾದ ಸಮಯ. ಒಟಿಟಿಯಲ್ಲಿ (OTT) ಪ್ರೇಕ್ಷಕರಿಗೆ ತಮಗೆ ಬೇಕಾದ ಸಮಯದಲ್ಲಿ ಕಂಟೆಂಟ್​ ಸಿಗುತ್ತಿದೆ. ಹಾಗಾಗಿ ಅವರು ಚಿತ್ರಮಂದಿರಕ್ಕೆ ಬರುತ್ತಿಲ್ಲ. ಹಾಗಾಗಿ ನಾವು ಆ ಸಮಯಕ್ಕೆ ಗೌರವ ನೀಡಬೇಕು. ಆಗ ನಮಗೆ ಪವರ್​ ಸಿಗುತ್ತದೆ’ ಎಂದು ರಮೇಶ್ ಅರವಿಂದ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು