AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷ ಕಳೆದರೂ ಕೈ ಸೇರದ ನೆರೆ ಪರಿಹಾರ, ಪ್ರತಿಭಟನೆ ನಿರತರಲ್ಲಿ ಮಹಿಳೆ ಅಸ್ವಸ್ಥ

[lazy-load-videos-and-sticky-control id=”0r1S_tNNGTY”] ಬೆಳಗಾವಿ: ಕಳೆದ ವರ್ಷದ ನೆರೆ ಪರಿಹಾರ ಇನ್ನೂ ಸಂಬಂಧಪಟ್ಟವರಿಗೆ ಸಿಗದ ಹಿನ್ನೆಲೆ, ನೆರೆ ಸಂತ್ರಸ್ತರು ನಡೆಸುತ್ತಿರುವ ಪ್ರತಿಭಟನಾನಿರತರ ಪೈಕಿ ಮಹಿಳೆಯೊಬ್ಬರು ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಕಳೆದ ಬಾರಿ ಬೆಳಗಾವಿ ಜಿಲ್ಲೆ, ಮಳೆಯ ಅಬ್ಬರದಿಂದಾಗಿ ಭಾರಿ ಹಾನಿಗೊಳಗಾಗಿತ್ತು. ಇದರಿಂದಾಗಿ ರೈತರು ತಮ್ಮ ಆಸ್ತಿಪಾಸ್ತಿಯನ್ನು ಕಳೆದುಕೊಂಡಿದ್ದರು. ಹೀಗಾಗಿ ರಾಜ್ಯ ಸರ್ಕಾರವೂ ಸಹ ಸಂಕಷ್ಟದಲ್ಲಿದ್ದ ನೆರೆ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿತ್ತು. ಆದರೆ ವರ್ಷಗಳು ಕಳೆದರೂ ನೆರೆ ಪರಿಹಾರ ಸಂತ್ರಸ್ತರಿಗೆ ತಲುಪಿಲ್ಲ. […]

ವರ್ಷ ಕಳೆದರೂ ಕೈ ಸೇರದ ನೆರೆ ಪರಿಹಾರ, ಪ್ರತಿಭಟನೆ ನಿರತರಲ್ಲಿ ಮಹಿಳೆ ಅಸ್ವಸ್ಥ
ಸಾಧು ಶ್ರೀನಾಥ್​
|

Updated on:Aug 26, 2020 | 1:14 PM

Share

[lazy-load-videos-and-sticky-control id=”0r1S_tNNGTY”]

ಬೆಳಗಾವಿ: ಕಳೆದ ವರ್ಷದ ನೆರೆ ಪರಿಹಾರ ಇನ್ನೂ ಸಂಬಂಧಪಟ್ಟವರಿಗೆ ಸಿಗದ ಹಿನ್ನೆಲೆ, ನೆರೆ ಸಂತ್ರಸ್ತರು ನಡೆಸುತ್ತಿರುವ ಪ್ರತಿಭಟನಾನಿರತರ ಪೈಕಿ ಮಹಿಳೆಯೊಬ್ಬರು ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಕಳೆದ ಬಾರಿ ಬೆಳಗಾವಿ ಜಿಲ್ಲೆ, ಮಳೆಯ ಅಬ್ಬರದಿಂದಾಗಿ ಭಾರಿ ಹಾನಿಗೊಳಗಾಗಿತ್ತು. ಇದರಿಂದಾಗಿ ರೈತರು ತಮ್ಮ ಆಸ್ತಿಪಾಸ್ತಿಯನ್ನು ಕಳೆದುಕೊಂಡಿದ್ದರು. ಹೀಗಾಗಿ ರಾಜ್ಯ ಸರ್ಕಾರವೂ ಸಹ ಸಂಕಷ್ಟದಲ್ಲಿದ್ದ ನೆರೆ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿತ್ತು. ಆದರೆ ವರ್ಷಗಳು ಕಳೆದರೂ ನೆರೆ ಪರಿಹಾರ ಸಂತ್ರಸ್ತರಿಗೆ ತಲುಪಿಲ್ಲ. ಇದರಿಂದಾಗಿ ನೆರೆ ಸಂತ್ರಸ್ತರು ಬೆಳಗಾವಿ ಜಿಲ್ಲೆ ರಾಮದುರ್ಗದ ತಹಶೀಲ್ದಾರ್ ಕಚೇರಿ ಎದುರು ಮೂರು ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ನಿರತರಾಗಿರುವ ಸಂತ್ರಸ್ತರು ಅನ್ನಾಹಾರಗಳನ್ನು ತ್ಯಜಿಸಿದ್ದಾರೆ. ಹೀಗಾಗಿ ಪ್ರತಿಭಟನೆ ನಿರತರಲ್ಲಿ ಮಹಿಳೆಯೊಬ್ಬರು ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಕುಸಿದುಬಿದ್ದ ಮಹಿಳೆಗೆ ಪ್ರತಿಭಟನೆಯಲ್ಲಿ ನಿರತರಾಗಿದ್ದ ಸಂತ್ರಸ್ತರೇ ನೀರು ಕುಡಿಸಿ ಆರೈಕೆ ಮಾಡಿದ್ದಾರೆ. ಅಸ್ವಸ್ಥಗೊಂಡು ಕುಸಿದುಬಿದ್ದರೂ, ಮಹಿಳೆ ಪ್ರತಿಭಟನೆಯಲ್ಲಿ ನಿರತರಾಗಿದ್ದು, ಪ್ರತಿಭಟನಾ ಸ್ಥಳದಲ್ಲಿ ಮಲಗಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

Published On - 10:32 am, Wed, 26 August 20

Follow Us
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಮಕರ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಮಕರ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ಬೃಹತ್ ಪ್ರತಿಭಟನೆ
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ಬೃಹತ್ ಪ್ರತಿಭಟನೆ
ಅಕ್ರಮ ರೆಸಾರ್ಟ್​​ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ
ಅಕ್ರಮ ರೆಸಾರ್ಟ್​​ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ
ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ
ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ