Mysuru: ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿ ಸರ್ಕಾರೀ ಆಸ್ಪತ್ರೆಯನ್ನು ಖಾಸಗಿಯಾಗಿಸಿ ಮಹಿಳಾ ವೈದ್ಯಾಧಿಕಾರಿ ಡಾ ಕೋಮಲ ಹಗಲು ದರೋಡೆ!

ಅರುಣ್​ ಕುಮಾರ್​ ಬೆಳ್ಳಿ

Updated on: Jul 04, 2023 | 11:59 AM

ಮೊನ್ನೆಯಷ್ಟೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮೈಸೂರು ಜಿಲಾಸ್ಪತ್ರೆಗೆ ಭೇಟಿ ನೀಡಿದ್ದರು.

ಮೈಸೂರು: ಗ್ಯಾರಂಟಿಗಳ ಜೊತೆಗೆ ದಕ್ಷ, ಲಂಚಮುಕ್ತ ಆಡಳಿತ ನೀಡುವ ಆಶ್ವಾಸನೆಗಳೊಂದಿಗೆ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ (Siddaramaiah) ಕಾಂಗ್ರೆಸ್ ಸರ್ಕಾರ ಸರ್ಕಾರಿ ಕಚೇರಿ ಮತ್ತು ಆಸ್ಪತ್ರೆಗಳಲ್ಲಿ ಏನೇನು ನಡೆಯುತ್ತಿದೆ ಅನ್ನೋದನ್ನು ಕೂಡಲೇ ಗಮನಿಸಬೇಕಿದೆ. ಮುಖ್ಯಮಂತ್ರಿಯ ತವರು ಜಿಲ್ಲೆಯಲ್ಲೇ ಅವ್ಯವಹಾರದ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ನಗರದ ಉದಯಗಿರಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ (public health centre) ಮಹಿಳಾ ವೈದ್ಯಾಧಿಕಾರಿ ಡಾ ಕೋಮಲ (Dr Komala) ಚಿಕಿತ್ಸೆಗೆ ಬರುವ ರೋಗಿಗಳಿಂದ ಹಣ ವಸೂಲು ಮಾಡಲು ಸಿಬ್ಬಂದಿಗೆ ಟಾರ್ಗೆಟ್ ನೀಡಿದ್ದಾರೆ ಮತ್ತು ಯಾವ್ಯಾವ ಸೇವೆಗೆ ಎಷ್ಟೆಷ್ಟು ಹಣ ಪಡೆಯಬೇಕು ಅಂತ ದರ ಸಹ ಫಿಕ್ಸ್ ಮಾಡಿದ್ದಾರೆ. ದಿನವೊಂದರಲ್ಲಿ ವಸೂಲಾದ ಹಣದಲ್ಲಿ ಡಾ ಕೋಮಲ ತಮ್ಮ ಪಾಲು ತೆಗೆದುಕೊಂಡು ಉಳಿದಿದ್ದನ್ನು ಸಿಬ್ಬಂದಿಗೆ ಹಂಚುತ್ತಿರುವ ವಿಡಿಯೋ ವೈರಲ್ ಆಗಿದೆ. ಮೊನ್ನೆಯಷ್ಟೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮೈಸೂರು ಜಿಲಾಸ್ಪತ್ರೆಗೆ ಭೇಟಿ ನೀಡಿದ್ದರು. ಸಚಿವರೇ, ಈಗ ಮತ್ತೊಮ್ಮೆ ಬಂದು ಈ ಡಾಕ್ಟರ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.