Belagavi: ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಲ್ಯಾಟರೇಟ್ ಗಣಿಕಾರಿಕೆ ದಂಧೆಕೋರರ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಫುಲ್ ರೆಬೆಲ್ ಆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಮ್ಮ ಸೂಚನೆ ಮೀರಿಯೂ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ತೆರಳಿರುವ ಆಫೀಸರ್, ಸ್ಥಳದಲ್ಲಿದ್ದ ಜೆಸಿಬಿಗೆ ಕಲ್ಲು ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ, ಫೆಬ್ರವರಿ 02: ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿಯೋರ್ವರು ಜೆಸಿಬಿ ವಾಹನಕ್ಕೆ ಕಲ್ಲೆಸೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಡೆದಿದೆ. ಅಕ್ರಮವಾಗಿ ನಡೆಯುತ್ತಿದೆ ಲ್ಯಾಟರೇಟ್ ಗಣಿಕಾರಿಕೆ ನಿಲ್ಲಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಬಿಂದನ್ ಪಾಟೀಲ್ ಸೂಚನೆ ನೀಡಿದ್ದರು. ಆದರೆ, ಅಧಿಕಾರಿ ಹೇಳಿದ್ರೂ ಕ್ಯಾರೇ ಎನ್ನದ ದಂಧೆಕೋರರು ತಮ್ಮ ಕೆಲಸ ಮುಂದುವರಿಸಿದ್ದಕ್ಕೆ ಜೆಸಿಬಿಗೆ ಕಲ್ಲು ಹೊಡೆದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.