AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರಿಗಮಪ’ ಫಿನಾಲೆಯಲ್ಲಿ ಲಹರಿ ಮಹೇಶ್​ಗೆ ಇಲ್ಲ ಸ್ಥಾನ; ಅಭಿಮಾನಿಗಳ ಆಕ್ರೋಶ

‘ಸರಿಗಮಪ’ ಫಿನಾಲೆಯಲ್ಲಿ ಲಹರಿ ಮಹೇಶ್​ಗೆ ಇಲ್ಲ ಸ್ಥಾನ; ಅಭಿಮಾನಿಗಳ ಆಕ್ರೋಶ

ರಾಜೇಶ್ ದುಗ್ಗುಮನೆ
|

Updated on: May 26, 2025 | 9:59 AM

Share

‘ಸರಿಗಮಪ’ ಫಿನಾಲೆ ಲಿಸ್ಟ್ ಘೋಷಣೆ ಆಗಿದೆ. ಒಟ್ಟೂ ಆರು ಮಂದಿ ಈ ಫಿನಾಲೆಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಆದರೆ, ಲಹರಿ ಮಹೇಶ್ ಅವರು ಫಿನಾಲೆಯಲ್ಲಿ ಇಲ್ಲ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರ ಕಂಠವನ್ನು ಎಲ್ಲರೂ ನೆಚ್ಚಿಕೊಂಡಿದ್ದರು. ಆದರೆ, ಫಿನಾಲೆಯಲ್ಲಿ ಅವರಿಲ್ಲ ಎಂಬುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

‘ಸರಿಗಮಪ’ (Saregamapa) ಫಿನಾಲೆಗೆ ದಿನಗಣನೆ ಶುರುವಾಗಿದೆ. ಈ ಬಾರಿ ಫಿನಾಲೆಯಲ್ಲಿ ಶಿವಾನಿ, ರಶ್ಮಿ ಡಿ, ಬಾಳು ಬೆಳಗುಂದಿ, ಆರಾಧ್ಯಾ ರಾವ್, ದ್ಯಾಮೇಶ್ ಹಾಗೂ ಅಮೋಘ ವರ್ಷ ಇದ್ದಾರೆ. ಆದರೆ, ಅತ್ಯುತ್ತಮವಾಗಿ ಹಾಡಿ ಗಮನ ಸೆಳೆದ ಲಹರಿ ಅವರಿಗೆ ಫಿನಾಲೆಗೆ ಅವಕಾಶ ಸಿಕ್ಕಿಲ್ಲ. ಇದಕ್ಕೆ ಅನೇಕರು ಅಪಸ್ವರ ತೆಗೆದಿದ್ದಾರೆ. ‘ಲಹರಿ ಉತ್ತಮವಾಗಿ ಹಾಡಿದವರು. ಅವರಿಗೆ ಫೈನಲ್​ಗೆ ಬರೋ ಅವಕಾಶ ಇತ್ತು’ ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ. ಅವರ ಧ್ವನಿಯಲ್ಲಿ ಮೂಡಿ ಬಂದ ಹಾಡನ್ನು ನೀವೇ ಕೇಳಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More