‘ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ’: ರಾಜ್ಯ ಪುರಾತತ್ವ ಇಲಾಖೆ

Edited By:

Updated on: Jan 12, 2026 | 2:22 PM

ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿಯ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ತಮ್ಮ ಮನೆಗೆ ಅಡಿಒಆಯ ಹಾಕುವಾಗ ಸಿಕ್ಕ ನಿಧಿಯನ್ನು ತಾಯಿ-ಮಗ ಸರ್ಕಾರಕ್ಕೊಪ್ಪಿಸಿದ್ದರು. ಮನೆಯ ಜಾಗದಲ್ಲಿ ಸಿಕ್ಕ ಚಿನ್ನ ನಿಧಿಯೇ ಅಲ್ಲ, ಅದು ಕುಟುಂಬಕ್ಕೇ ಸೇರಿದ್ದೆಂದು ತಜ್ಞರು ಹೇಳಿದ್ದರು. ಈ ಮಾತು ಕೇಳಿದ ಬಡ ಕುಟುಂಬವೂ ಕೊಟ್ಟ ಬಂಗಾವರನ್ನು ವಾಪಸ್ ಕೇಳಿದ. ಇದೆಲ್ಲದರ ನಡುವೆ ರಾಜ್ಯ ಪುರಾತತ್ವ ಇಲಾಖೆಯ ನಿರ್ದೇಶಕರು ಈ ಕುರಿತು ಸ್ಪಷ್ಟನೆ ನೀಡಿದ್ದು, ನಿಯಮಗಳ ಪ್ರಕಾರ, ನಿಧಿ ಕಂಡ ಕುಟುಂಬಕ್ಕೆ ಅದರ ಮೌಲ್ಯದ ಐದನೇ ಒಂದು ಭಾಗದಷ್ಟು (ಶೇ. 20) ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಗದಗ, ಜನವರಿ 12: ಲಕ್ಕುಂಡಿಯಲ್ಲಿ ಪತ್ತೆಯಾದ ನಿಧಿಯ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ತಮ್ಮ ಮನೆಗೆ ಅಡಿಪಾಯ ಹಾಕುವಾಗ ಸಿಕ್ಕ ನಿಧಿಯನ್ನು ತಾಯಿ-ಮಗ ಸರ್ಕಾರಕ್ಕೊಪ್ಪಿಸಿದ್ದರು. ಮನೆಯ ಜಾಗದಲ್ಲಿ ಸಿಕ್ಕ ಚಿನ್ನ ನಿಧಿಯೇ ಅಲ್ಲ, ಅದು ಕುಟುಂಬಕ್ಕೇ ಸೇರಿದ್ದೆಂದು ತಜ್ಞರು ಹೇಳಿದ್ದರು. ಈ ಮಾತು ಕೇಳಿದ ಬಡ ಕುಟುಂಬವೂ ಕೊಟ್ಟ ಬಂಗಾವರನ್ನು ವಾಪಸ್ ಕೇಳಿದ. ಇದೆಲ್ಲದರ ನಡುವೆ ರಾಜ್ಯ ಪುರಾತತ್ವ ಇಲಾಖೆಯ ನಿರ್ದೇಶಕರು ಈ ಕುರಿತು ಸ್ಪಷ್ಟನೆ ನೀಡಿದ್ದು, ನಿಯಮಗಳ ಪ್ರಕಾರ, ನಿಧಿ ಕಂಡ ಕುಟುಂಬಕ್ಕೆ ಅದರ ಮೌಲ್ಯದ ಐದನೇ ಒಂದು ಭಾಗದಷ್ಟು (ಶೇ 20) ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲಾಡಳಿತವು ನಿಧಿಯ ಮೌಲ್ಯವನ್ನು ನಿರ್ಧರಿಸಿದ ನಂತರ, ಆ ಮೌಲ್ಯದ ಐದನೇ ಒಂದು ಭಾಗವನ್ನು ಹಣಕಾಸಿನ ರೂಪದಲ್ಲಿ ಕುಟುಂಬಕ್ಕೆ ಹಸ್ತಾಂತರಿಸಲಾಗುತ್ತದೆ. ಇದು ಭಾರತೀಯ ನಿಧಿ ಕಾಯಿದೆ 1878 ರ ಅಡಿಯಲ್ಲಿರುವ ನಿಯಮವಾಗಿದ್ದು, ಪ್ರಾಮಾಣಿಕವಾಗಿ ನಿಧಿ ವರದಿ ಮಾಡಿದವರಿಗೆ ಪರಿಹಾರ ನೀಡುವ ವ್ಯವಸ್ಥೆ ಇದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

 

 

Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More