ಬೆಂಗಳೂರಿನಲ್ಲಿ ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ವ್ಯಕ್ತಿ ಅಟ್ಟಹಾಸದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Edited By:

Updated on: Nov 15, 2024 | 6:09 PM

ಬೆಂಗಳೂರಿನ ಜೀವನ್ ಭೀಮಾನಗರದ ಲಕ್ಷ್ಮೀ ಭುವನೇಶ್ವರಿ ದೇಗುಲದಲ್ಲಿ ಮುಂಜಾನೆ ಅಪರಿಚಿತ ವ್ಯಕ್ತಿಯೊಬ್ಬ ದೇವರ ವಿಗ್ರಹವನ್ನು ವಿರೂಪಗೊಳಿಸಿದ್ದಾನೆ. ಸಿಸಿಟಿವಿ ಕ್ಯಾಮೆರಾದಲ್ಲಿ ಕಾಣಿಸದಂತೆ ಮುಖ ಮುಚ್ಚಿಕೊಳ್ಳಲಾಗಿದೆ. ಘಟನೆಯಿಂದ ಸ್ಥಳೀಯರು ಮತ್ತು ಭಕ್ತಾದಿಗಳು ಆಕ್ರೋಶಗೊಂಡಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾಗಿದ್ದಾರೆ.

ಬೆಂಗಳೂರು, ನವೆಂಬರ್​ 15: ದೇಗುಲಕ್ಕೆ ನುಗ್ಗಿ ಲಕ್ಷ್ಮೀ ಭುವನೇಶ್ವರಿ ದೇವರ ವಿಗ್ರಹವನ್ನು ದುಷ್ಕರ್ಮಿ ವಿರೂಪಗೊಳಿಸಿ (Idol Deformation) ವಿಕೃತಿ ಮೆರೆದಿರುವಂತಹ ಘಟನೆ ನಗರದ ಜೀವನ್ ಭೀಮಾನಗರ ಠಾಣಾ ವ್ಯಾಪ್ತಿಯಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ನಡೆದಿದೆ. ಸಿಸಿ ಕ್ಯಾಮರಾದಲ್ಲಿ ಕಾಣಿಸದಂತೆ ದುಷ್ಕರ್ಮಿ ಮುಖ ಮುಚ್ಚಿಕೊಂಡಿದ್ದಾನೆ. ಸದ್ಯ ವಿಗ್ರಹ ವಿರೂಪಗೊಳಿಸಿದ ಹಿನ್ನೆಲೆ ಸ್ಥಳೀಯರು ಮತ್ತು ಭಕ್ತಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್‌ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us